ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 20 JUNE 2023
THIRTHAHALLI : ಅಪ್ರಾಪ್ತನಿಗೆ ಬೈಕ್ (Bike) ಚಲಾಯಿಸಲು ಕೊಟ್ಟ ಮಾಲೀಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತೀರ್ಥಹಳ್ಳಿಯಲ್ಲಿ ವಾಹನ ತಪಾಸಣೆ ವೇಳೆ ಬೈಕ್ ಚಲಾಯಿಸಿಕೊಂಡು ಬಂದಿದ್ದ ಅಪ್ರಾಪ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.
ಜೂ.19ರಂದು ಕುಶಾವತಿ ಬಳಿ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಯುವಕನ್ನು ತಡೆದು ವಿಚಾರಣೆ ಮಾಡಿದಾಗ ಅಪ್ರಾಪ್ತ ಎಂದು ಗೊತ್ತಾಗಿದೆ. ಅಪ್ರಾಪ್ತನ ಕೈಗೆ ಬೈಕ್ (Bike) ನೀಡಿದ ಆರೋಪ ಸಂಬಂಧ ಬೈಕ್ ಮಾಲೀಕ ಕಳ್ಳಿಗದ್ದೆ ಗ್ರಾಮದ ಎಸ್.ಕೆ.ಪ್ರಮೋದ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ – ಅಪ್ರಾಪ್ತ ಬಾಲಕನ ಕೈಗೆ ಬೈಕ್ ಕೊಟ್ಟು ಪೇಚಿಗೆ ಸಿಲುಕಿದ ಪೋಷಕರು, ಭಾರಿ ದಂಡ ವಿಧಿಸಿದ ಕೋರ್ಟ್
ನ್ಯಾಯಾಲಯಕ್ಕೆ ದೋಷಾರೋಪ ವರದಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು ವಾಹನ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದ್ದಾರೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು















