ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JULY 2023
ANANDAPURA : ಭೂ ವಿವಾದ ಸಂಬಂಧ ಸಿನಿಮಾ ನಟಿ (Actress) ಮತ್ತು ಆಕೆಯ ತಂದೆಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಟಿ ಚಿಕಿತ್ಸೆ ಪಡೆದಿದ್ದಾರೆ.

ನಟಿ ಅನಿತಾ ಗೌಡ ಮತ್ತು ಆಕೆಯ ತಂದೆ ಶ್ರೀನಿವಾಸ ಗೌಡ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಏನಿದು ಪ್ರಕರಣ?
ಸಾಗರ ತಾಲೂಕು ಕಾಸ್ಪಾಡಿ ಗ್ರಾಮದ ಸರ್ವೇ ನಂಬರ್ 43ರ ಜಮೀನು ಸಂಬಂಧ ಶ್ರೀನಿವಾಸ ಗೌಡ ಮತ್ತು ಮೋಹನ್ ಎಂಬವವರಿಗೆ ವಿವಾದವಿದೆ. ಜೂ.30ರಂದು ನಟಿ ಅನಿತಾ ಗೌಡ ಮತ್ತು ಶ್ರೀನಿವಾಸ ಗೌಡ ಅವರು ಜಮೀನಿನಲ್ಲಿ ಕೆಲಸ ಮಾಡುವಾಗ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಅನಿತಾ ಗೌಡ ಕನ್ನಡ ಮತ್ತು ತಮಿಳು ಭಾಷೆಯ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ (Actress). ಹುಡುಗರು, ಕೆಂಪೇಗೌಡ, ದಂಡಂ ದಶಗುಣಂ, ಬೃಂದಾವನ ಸೇರಿದಂತೆ ಕನ್ನಡ ಸಿನಿಮಾಗಳಲ್ಲಿ ಪಾತ್ರ ಮಾಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು, ಯಾರದು ಆರೋಪಿ? ಗುಂಡು ಹಾರಿಸಿದ್ದೇಕೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





