ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JULY 2023
BHADRAVATHI : ನಗರಸಭೆ ಅಧ್ಯಕ್ಷೆಯಾಗಿ (President) 30ನೇ ವಾರ್ಡ್ ಸದಸ್ಯೆ ಶ್ರುತಿ ವಂಸತಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆ ಸದಸ್ಯರು ಶುಭ ಕೋರಿದರು.

ತೆರವಾಗಿದ್ದ ನಗರಸಭೆ ಅಧ್ಯಕ್ಷ (President) ಸ್ಥಾನಕ್ಕೆ ಚುನಾವಣೆಗೆ ಶ್ರುತಿ ವಸಂತಕುಮಾರ್ ಅವರ ಹೊರತು ಮತ್ತಿನ್ಯಾರು ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್ ಅವರು, ಶ್ರುತಿ ವಸಂತ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್, ಇನ್ನೆರಡು ದಿನ ಯಲ್ಲೋ ಅಲರ್ಟ್
ಪಟಾಕಿ ಸಿಡಿಸಿ, ಸಿಹಿ ಹಂಚಿದರು
ಶ್ರುತಿ ವಸಂತಕಮಾರ್ ಅವರು ನಗರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಈ ಸಂದರ್ಭ ನಗರಸಭೆ ಉಪಾಧ್ಯಕ್ಷೆ ಸರ್ವ ಮಂಗಳಾ ಭೈರಪ್ಪ, ನಗರಸಭೆ ಸದಸ್ಯರು ಹಾಜರಿದ್ದರು.

ಮೊದಲ ಬಾರಿ ಸದಸ್ಯೆಗೆ ಅಧ್ಯಕ್ಷ ಗಾದಿ
ನಗರಸಭೆಯ 30ನೇ ವಾರ್ಡ್ನಿಂದ ಶ್ರುತಿ ವಸಂತಕುಮಾರ್ ಅವರು ಮೊದಲ ಬಾರಿ ಆಯ್ಕೆಯಾಗಿದ್ದು, ಇದೆ ಅವಧಿಯಲ್ಲೆ ಅಧ್ಯಕ್ಷರಾಗುವ ಅದೃಷ್ಟ ಒಲಿದು ಬಂದಿದೆ. ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಅರ್ಹರಿಗೆ ಅಧಿಕಾರ ಲಭಿಸಬೇಕು ಎಂಬ ಒಪ್ಪಂದದ ಪ್ರಕಾರ ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಗೀತಾ ರಾಜಕುಮಾರ್, ಅನುಸುಧಾ ಮೋಹನ್ ಅವರು ಈಗಾಗಲೆ ನಗರಸಭೆ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





