ಶಿವಮೊಗ್ಗದಲ್ಲಿ ಹಾಡಹಗಲೆ ನಡುರಸ್ತೆಯಲ್ಲೇ ಕೊಲೆ ಕೇಸ್‌, ನಾಲ್ವರಿಗೆ ಶಿಕ್ಷೆ, ಎಷ್ಟು ವರ್ಷ ಜೈಲು? ದಂಡ ಎಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JULY 2023

SHIMOGA : ಕೊಲೆ ಪ್ರಕರಣವೊಂದರ ನಾಲ್ವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯವು ಜೀವಾವಧಿ ಶಿಕ್ಷೆ (Life Time Imprisonment) ಮತ್ತು ತಲಾ 50 ಸಾವಿರ ರೂ. ದಂಡ ವಿಧಿಸಿದೆ. ಅಣ್ಣಾನಗರ ಮುಖ್ಯರಸ್ತೆಯಲ್ಲಿ 2017ರಲ್ಲಿ ಹಯಾತುಲ್ಲಾಖಾನ್‌ ಎಂಬಾತನ ಹತ್ಯೆ ಮಾಡಲಾಗಿತ್ತು. ಅರ್ಬಾಜ್‌, ಶಾರುಕ್‌ ಖಾನ್‌, ಸದಾಬ್‌, ಅಲ್ಯಾಜ್‌ ಅಶುಗೆ ಜೀವಾವಧಿ ಶಿಕ್ಷೆಯಾಗಿದೆ.

Life-Time-Imprisonment-four-accused-in-Shimoga-Tippunagara

ಏನಿದು ಪ್ರಕರಣ? ಹತ್ಯೆಗೇನು ಕಾರಣ?

ಅಣ್ಣಾನಗರ ವಾಸಿ ಹಯಾತುಲ್ಲಾಖಾನ್‌ ಅಲಿಯಾಸ್‌ ಬಚ್ಚಾ (19) ಗ್ಯಾಂಗ್‌ ಮತ್ತು ಟಿಪ್ಪು ನಗರ ನಿವಾಸಿಗಳಾದ ಕುರ್ರಮ್‌ ಮತ್ತು ಇಮ್ರಾನ್‌ ಷರೀಫ್‌ ಗ್ಯಾಂಗ್‌ ಮಧ್ಯೆ ಹಳೆ ದ್ವೇಷವಿತ್ತು. 2016ರಲ್ಲಿ ಕುರ್ರಮ್‌ನ ಸಹಚರ ಶಾಹಿದ್‌ ಬಾಷಾ ಎಂಬಾತನಿಗೆ ಹಯಾತುಲ್ಲಾ ಖಾನ್‌ ಮತ್ತು ಗ್ಯಾಂಗ್‌ ಚಾಕು ಚುಚ್ಚಿ ಕೊಲೆಗೆ ಯತ್ನಿಸಿತ್ತು. ಈ ಪ್ರಕರಣದಲ್ಲಿ ಹಯಾತುಲ್ಲಾ ಖಾನ್‌ ಜೈಲಿಗೆ ಹೋಗಿದ್ದ. ಬಿಡುಗಡೆಯಾಗಿ ಬಂದ ಮೇಲೆ ಕುರ್ರಮ್‌ ಗ್ಯಾಂಗಿನವರು ಹಯಾತುಲ್ಲಾನ ಕೊಲೆಗೆ ಸಂಚು ರೂಪಿಸಿದ್ದರು.

ಸ್ಟೂಡಿಯೋ ಮುಂದೆ ಒಬ್ಬನೆ ಕುಳಿತಿದ್ದಾಗ ದಾಳಿ

2017ರ ಫೆಬ್ರವರಿ 8ರಂದು ಹಯಾತುಲ್ಲಾ ಖಾನ್‌ ಅಣ್ಣಾ ನಗರ ಮುಖ್ಯ ರಸ್ತೆಯಲ್ಲಿರುವ ಸ್ಟೂಡಿಯೋ ಒಂದರ ಮುಂದೆ ಒಬ್ಬನೆ ಕುಳಿತಿದ್ದ. ಮಾಹಿತಿ ತಿಳಿಯುತ್ತಿದ್ದಂತೆ ಕುರ್ರಮ್‌ ಗ್ಯಾಂಗ್‌ ಮಾರಕಾಸ್ತ್ರ ಸಹಿತ ದಾಳಿ ನಡೆಸಿತ್ತು. ಅರ್ಬಾಜ್‌, ಶಾರುಕ್‌ ಖಾನ್‌, ಸದಾಬ್‌, ಅಲ್ಯಾಜ್‌ ಅಶು ಚಾಕುವಿನಿಂದ ಹಯಾತುಲ್ಲಾಖಾನ್‌ನ ಹೊಟ್ಟೆ, ಎದೆ, ಪಕ್ಕೆಗೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಬಚ್ಚಾ ಮರ್‌ಗಯಾ ಎಂದು ಕೂಗುತ್ತ ಬೈಕಿನಲ್ಲಿ ಹೋಗಿದ್ದರು.

ಇದನ್ನೂ ಓದಿ – ಗ್ಯಾಸ್‌ ಏಜೆನ್ಸಿ ಶುರು ಮಾಡುವುದು ಹೇಗೆ? ಗೂಗಲ್‌ನಲ್ಲಿ ಹುಡುಕಿದ ನಿವೃತ್ತ ಉದ್ಯೋಗಿಗೆ ಕೊನೆಗೆ ಕಾದಿತ್ತು ಶಾಕ್

ಆರೋಪ ಸಬೀತು, ಶಿಕ್ಷೆ ಪ್ರಕಟ

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಕೆ.ಟಿ.ಗುರುರಾಜ್‌ ಅವರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೊಡ್ಡಪೇಟೆ ಠಾಣೆಯ ಸಿಬ್ಬಂದಿ ಸುರೇಶ್‌ ಮತ್ತು ತುಂಗಾ ನಗರ ಠಾಣೆಯ ಸಿಬ್ಬಂದಿ ಉಮೇಶ್‌ ತನಿಖೆ ವೇಳೆ ಸಹಕರಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎಸ್‌. ಮಾನು ಅವರು ನಾಲ್ವರು ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ (Life Time Imprisonment), ತಲಾ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಆರು ತಿಂಗಳು ಹೆಚ್ಚುವರಿ ಶಿಕ್ಷೆ ವಿಧಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಜೆ.ಶಾಂತರಾಜ್‌ ವಾದ ಮಂಡಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 6, 2023

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

Leave a Comment