ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 9 JULY 2023
SAGARA : ಕೆಲವು ದಿನದಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಹುಚ್ಚು ಹಸುವೊಂದನ್ನು (Cow) ಮೂವರು ಯುವಕರು ಸಾರ್ವಜನಿಕರ ಸಹಕಾರದೊಂದಿಗೆ ಹರಸಾಹಸ ಪಟ್ಟು ಹಿಡಿದಿದ್ದಾರೆ.

ನಾಲ್ಕೈದು ದಿನದಿಂದ ಸಾಗರ ಪಟ್ಟಣದ ವಿವಿಧೆಡೆ ಹುಚ್ಚು ಹಿಡಿದ ಹಸುವೊಂದು ಉಪಟಳ ನೀಡುತ್ತಿತ್ತು. ಜನರು, ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿತ್ತು. ಶುಕ್ರವಾರ ಬೆಳಗ್ಗೆ ಮಂಕಳಲೆ ಭಾಗದಲ್ಲಿ ಹಸು ತೊಂದರೆ ಕೊಟ್ಟಿತ್ತು. ಮಧ್ಯಾಹ್ನದ ವೇಳೆಗೆ ವಿನೋಬಗರದಲ್ಲಿ ಪುಂಡಾಟ ಮಾಡಿತ್ತು.
ಗಾಂಧಿ ನಗರದ ಆನಂದ್, ಮಾರುತಿ ಮತ್ತು ಪವನ್ ಎಂಬುವವರು ಬಲೆ ಬೀಸಿ, ಚಾಣಾಕ್ಷತನದಿಂದ ಹುಚ್ಚು ಹಸುವನ್ನು ಸೆರೆ ಹಿಡಿದಿದ್ದಾರೆ. ಸುರಿಯುವ ಮಳೆಯಲ್ಲೇ ಕಾರ್ಯಾಚರಣೆ ನಡೆಸಿದ ಹಸುವನ್ನು (Cow) ಬಲೆಗೆ ಕೆಡವಿದ್ದಾರೆ. ಯುವಕರ ಕಾರ್ಯಾಚರಣೆಗೆ ಸ್ಥಳೀಯರು ಕೂಡ ನೆರವಾಗಿದ್ದರು. ಹಸು ಸೆರೆಯಾಗಿರುವುದರಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಇದನ್ನೂ ಓದಿ – ಮೊಬೈಲ್ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ, ಸಮಗ್ರ ತನಿಖೆಗೆ ಒತ್ತಾಯ

LATEST NEWS
- ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?