ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 10 JULY 2023
SAGARA / HOSANAGARA : ಶರಾವತಿ ಹಿನ್ನೀರು ಭಾಗದಲ್ಲಿ ಲಾಂಚ್ಗಳ (Launch) ಸೇವೆ ಯಥಾಸ್ಥಿತಿಗೆ ಮರಳಿವೆ. ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗಿತ್ತು. ಸಿಗಂದೂರು ಲಾಂಚ್ನಲ್ಲಿ ಜನ ಸಂಚಾರಕ್ಕಷ್ಟೆ ಅವಕಾಶ ಕಲ್ಪಿಸಲಾಗಿತ್ತು.
ನೀರಿನ ಮಟ್ಟ ಹೆಚ್ಚಳ ಆಗಿರುವುದರಿಂದ ಲಾಂಚ್ ಸೇವೆ ಯಥಾಸ್ಥಿತಿಗೆ ಮರಳಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನುಕೂಲವಾಗಲಿದೆ.
ಯಥಾಸ್ಥಿತಿಗೆ ಸಿಗಂದೂರು ಲಾಂಚ್
ಸಿಗಂದೂರು ಲಾಂಚ್ (Launch) ಸೇವೆ ಯಥಾಸ್ಥಿತಿಗೆ ಮರಳಿದೆ. ಶರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದರಿಂದ ಹೊಳೆಬಾಗಿಲು – ಕಳಸವಳ್ಳಿ ನಡುವೆ ಸಂಚರಿಸುತ್ತಿದ್ದ ಲಾಂಚ್ಗಳಲ್ಲಿ ವಾಹನಗಳನ್ನು ಹತ್ತಿಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಮಳೆಯಾಗದೆ ಹೋಗಿದ್ದರೆ ಲಾಂಚ್ಗಳ ಸಂಚಾರವು ಬಂದ್ ಆಗುವ ಆತಂಕವಿತ್ತು. ಈಗ ಮಳೆಯಾಗಿದ್ದು, ನದಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇದರಿಂದ ಲಾಂಚ್ನಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಸಿರುಮಕ್ಕಿ ಲಾಂಚ್ ಸೇವೆ ಪುನಾರಂಭ
35 ದಿನದ ಬಳಿಕ ಹಸಿರುಮಕ್ಕಿ ಲಾಂಚ್ ಸೇವೆ ಪುನಾರಂಭವಾಗುತ್ತಿದೆ. ಈ ಭಾಗದಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದರಿಂದ ಜೂನ್ 4ರಂದು ಲಾಂಚ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಈಗ ನೀರಿನ ಮಟ್ಟ ಏರಿಕೆಯಾಗಿದ್ದು, ಭಾನುವಾರ ಲಾಂಚ್ ಟ್ರಯಲ್ ರನ್ ನಡೆಸಲಾಯಿತು. ಇಂದಿನಿಂದ ಹಸಿರುಮಕ್ಕಿ ಲಾಂಚ್ ಸೇವೆ ಪುನಾರಂಭವಾಗುತ್ತಿದೆ. ಆರಂಭದಲ್ಲಿ ಲಘು ವಾಹನಗಳನ್ನು ಮಾತ್ರ ಲಾಂಚ್ನಲ್ಲಿ ಹತ್ತಿಸಲು ನಿರ್ಧರಿಸಲಾಗಿದೆ. ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾದ ಮೇಲೆ ಬಸ್ ಸೇರಿದಂತೆ ಭಾರಿ ವಾಹನಗಳನ್ನು ಹತ್ತಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ – ಜೋಗ ಜಲಪಾತದ ವೈಭವ, ಕಣ್ತುಂಬಿಕೊಳ್ಳಲು ಜನವೋ ಜನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















