ಹಂತಕರ ವಿರುದ್ಧ ಜೈನ ಸಮುದಾಯದ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ | ಗೌರವ ಧನಕ್ಕಾಗಿ ತರಬೇತುದಾರರ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Modern Cement Articles

SHIVAMOGGA LIVE | 11 JULY 2023

ಜೈನ ಮುನಿ ಹತ್ಯೆಯ ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Shimoga Jains Held protest against Nippani Incident

SHIMOGA : ಚಿಕ್ಕೋಡಿಯಲ್ಲಿ ಜೈನ ಮುನಿ ಶ್ರೀ 108 ಕಾಮಕುಮಾರ FATAFAT NEWS 1 jpgನಂದಿ ಮಹಾರಾಜ್‌ ಅವರ ಹತ್ಯೆ ಖಂಡಿಸಿ ದಿಗಂಬರ ಜೈನ (Jains) ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಹತ್ಯೆ ಆರೋಪಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಹಿಂಸೆಯ ಪ್ರತಿಪಾದಕರಾದ ಜೈನ ಸಾಧುವನ್ನು ಹತ್ಯೆ ಮಾಡಿರುವುದು ಹೇಯ ಕೃತ್ಯ. ಪಾತಕಿಗಳ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಘದ (Jains) ಅಧ್ಯಕ್ಷ ಪ್ರಭಾಕರ್‌ ಗೋಗಿ, ಕಾರ್ಯದರ್ಶಿ ವಿಶ್ವನಾಥ್‌ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್‌, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ

FATAFAT-MORE-NEWS

ಮಹಿಳಾ ಕರಾಟೆ ತರಬೇತುದಾರರಿಗೆ ಗೌರವ ಧನ ಕೊಟ್ಟಿಲ್ಲ

Karate Trainers Memorandum

SHIMOGA : ಮಹಿಳಾ ಕರಾಟೆ ತರಬೇತುದಾರರಿಗೆ ಸಮಾಜ ಕಲ್ಯಾಣ FATAFAT NEWS 2 jpgಇಲಾಖೆಯಿಂದ ಗೌರವಧನ ಪಾವತಿಸುತ್ತಿಲ್ಲ. ಬಾಕಿ ಇರುವ ಗೌರವ ಧನವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 2021 – 22ನೇ ಸಾಲಿನಲ್ಲಿ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಕರಾಟೆ ತರಬೇತಿ ನೀಡಿದ ತರಬೇತುದಾರರಿಗೆ, ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ಟ್‌ ವಸತಿ ಶಾಲೆಗಳಲ್ಲಿನ ತರಬೇತುದಾರರಿಗೆ ಗೌರವ ಧನ ನೀಡಿಲ್ಲ. ಇದರಿಂದ ಕರಾಟೆ ತರಬೇತುದಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೆ ಹಣ ಬಿಡುಗಡೆ ಮಾಡುವಂತೆ ಜಿಲ್ಲಾ ಮಹಿಳಾ ತರಬೇತುದಾರರ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಒತ್ತಾಯಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕುಸಿತ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?

FATAFAT-MORE-NEWS

ಬೀದಿಗಿಳಿದ ಬಿಸಿ ಊಟ ನೌಕರರು, ಬೇಡಿಕೆ ಈಡೇರಿಕೆಗೆ ಒತ್ತಾಯ

Akshara Dasoha Naukara Protest in Shimoga

SHIMOGA : ಬಿಸಿ ಊಟ ನೌಕರರಿಗೆ ಹಿಂದಿನ ಸರ್ಕಾರ ಒಂದು ಸಾವಿರ FATAFAT NEWS 3 jpgರೂ. ಗೌರವಧನ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು. ಈ ಕುರಿತು ಇನ್ನೂ ಆದೇಶ ಮಾಡಿಲ್ಲ. ಕೂಡಲೆ ಗೌರವ ಧನ ಹೆಚ್ಚಳದ ಆದೇಶ ಮಾಡಬೇಕು. ಮಾರ್ಗದರ್ಶಿ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು 4 ಗಂಟೆ ಬದಲಾಗಿ 6 ಗಂಟೆ ಎಂದು ತಿದ್ದುಪಡಿ ಮಾಡಬೇಕು. ನಿವೃತ್ತ ಮತ್ತು ನಿವೃತ್ತಿ ಹೊಂದುತ್ತಿರುವ ನೌಕರರಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತದಲ್ಲಿ ಮೃತರಾದ ನೌಕರರ ಕುಟುಂಬದವರಿಗೆ ಕೆಲಸ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment