ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 15 JULY 2023
SHIMOGA : ನಗರದ ಇಂದಿರಾ ಕ್ಯಾಂಟೀನ್ಗೆ (Indira Canteen) ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು.
ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ಗೆ (Indira Canteen) ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.
ಏನೇನೆಲ್ಲ ಪರಿಶೀಲನೆ ನಡೆಸಿದರು?
ಇಂದಿರಾ ಕ್ಯಾಂಟೀನ್ ಆವರಣದಲ್ಲಿರುವ ಸ್ವಚ್ಛತೆ, ಉಪಕರಣಗಳು, ಪಾತ್ರೆಗಳು, ಬಾಗಿಲು, ಆಹಾರದ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಈ ಸಂದರ್ಭ ಹಲವು ನ್ಯೂನತೆ ಕಂಡು ಬಂದಿದ್ದು, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಗರಂ ಆದರು. ಗುತ್ತಿಗೆದಾರರು, ಹಿಂದಿನ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದಿರಾ ಕ್ಯಾಂಟೀನ್ನ ಬೋರ್ಡ್, ಬಾಗಿಲುಗಳು ಮುರಿದು ಹೋಗಿವೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದಿರುವುದು ಗಮನಕ್ಕೆ ಬಂತು.
ಆಹಾರದ ಗುಣಮಟ್ಟ ಪರಿಶೀಲನೆ
ಗುಣಮಟ್ಟ ಪರೀಕ್ಷೆಗಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತು ಕೆಲವು ಕಾರ್ಯಕರ್ತರು ಕ್ಯಾಂಟೀನ್ನಲ್ಲಿ ಊಟ ಮಾಡಿದರು. ಮೊಸರನ್ನದಲ್ಲಿ ಮೊಸರಿನ ಬದಲು ನೀರು ಹಾಕಲಾಗಿದೆ ಎಂದು ಆರೋಪಿಸಿದರು.
ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಎಸ್.ಸುಂದರೇಶ್ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.


ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಈ ವೇಳೆ ಇದ್ದರು.

LATEST NEWS
- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















