SHIVAMOGGA LIVE | 26 JULY 2023
SHIMOGA : ಸ್ಮಾರ್ಟ್ ಸಿಟಿ ಯೋಜನೆಯ ಭೂಗತ ಕೇಬಲ್ ಕಾಮಗಾರಿ ವಿರುದ್ಧ ಮಹಾನಗರ ಪಾಲಿಕೆ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪಕ್ಷಭೇದ ಮರೆತು ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಜನ, ಜಾನುವಾರುಗಳ ಜೀವದ ಜೊತೆ ಚೆಲ್ಲಾಟ ಆಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಯುಜಿ ಕೇಬಲ್ ಕಾಮಗಾರಿ ವಿರುದ್ಧ ಪಾಲಿಕೆ ಸದಸ್ಯರು ಗರಂ ಆದರು. ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಯುಜಿ ಕೇಬಲ್ ಕಾಮಗಾರಿ ಫೋಟೊಗಳನ್ನು ಪ್ರದರ್ಶಿಸಿ ವಿಷಯ ಪ್ರಸ್ತಾಪಿಸಿದರು. ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ಒಳಪಡುವ ವಾರ್ಡ್ಗಳ ಸರ್ವ ಪಕ್ಷದ ಪಾಲಿಕೆ ಸದಸ್ಯರು ಧ್ವನಿಗೂಡಿಸಿದರು.
ಯಾರೆಲ್ಲ ಏನೇನು ಹೇಳಿದರು?
ಸಭೆ ನಡೆಸಿ ಸಮಸ್ಯೆ ಪರಿಹಾರ
ಪಾಲಿಕೆ ಸದಸ್ಯರ ಅಭಿಪ್ರಾಯ ಕೇಳಿದ ಬಳಿಕ ಆಯುಕ್ತ ಮಾಯಣ್ಣಗೌಡ ಮಾತನಾಡಿ, ಜು.27ರಂದು ಸ್ಮಾರ್ಟ್ ಸಿಟಿ ಗೌರ್ನಿಂಗ್ ಕಮಿಟಿ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಈ ವೇಳೆ ಸಮಸ್ಯೆಗಳ ಕುರಿತ ಪ್ರಸ್ತಾಪಿಸುತ್ತೇನೆ. ಈಗಾಗಲೆ ಸ್ಮಾರ್ಟ್ ಸಿಟಿ ಯೋಜನೆಯ ಶೇ.98ರಷ್ಟು ಕೆಲಸ ಪೂರ್ಣಗೊಂಡಿದೆ. ಶೇ.50ರಷ್ಟು ಸಿಬ್ಬಂದಿಯನ್ನು ಕಡಿತಗೊಳಿಸಲಾಗಿದೆ. ಹೊಸ ಕೆಲಸಗಳಿಗೆ ಅನುದಾನವಿಲ್ಲ ಎಂದು ತಿಳಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಆಗಸ್ಟ್ 3ರಂದು ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಯ ಪಾಲಿಕೆ ಸದಸ್ಯರು, ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಜೂನ್ವರೆಗೆ ಯೋಜನೆ ಅವಧಿ ವಿಸ್ತರಣೆ ಮಾಡಲಾಗಿದೆ. ಅಷ್ಟರಲ್ಲಿ ಸಮಸ್ಯೆಗಳ ಪರಿಹಾರ ಮಾಡಲು ಕಾರ್ಯಪ್ರವೃತ್ತರಾಗೋಣ ಎಂದು ತಿಳಿಸಿದರು.
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ