ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 JULY 2023
SHIMOGA : ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿರುವ ಎಫ್.ಎಂ ಕೇಂದ್ರವನ್ನು (FM Transmitter) ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದ ಪ್ರಸಾರ ಭಾರತಿ ಅನುಮತಿ ನೀಡಿದೆ. ಇದಕ್ಕಾಗಿ 10 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ ಸಂಸದ ರಾಘವೇಂದ್ರ, ಭದ್ರಾವತಿ ಆಕಾಶವಾಣಿ ಕೇಂದ್ರ ಪ್ರಸ್ತುತ 1 ಕಿಲೋ ವ್ಯಾಟ್ ಸಾಮರ್ಥ್ಯದ ಟ್ರಾನ್ಸ್ಮೀಟರ್ ಹೊಂದಿದೆ. ಇದನ್ನು 10 ಕಿ.ವ್ಯಾ.ಗೆ ಮೇಲ್ದೆರ್ಜೆಗೇರಿಸಲಾಗುತ್ತಿದೆ. ಇದಕ್ಕಾಗಿ 10 ಕೋಟಿ ರೂ. ಮಂಜೂರಾಗಿದ್ದು, ಡಿಸೆಂಬರ್ ವೇಳೆಗೆ ಈ ಕಾರ್ಯ ಪೂರ್ಣಗೊಳ್ಳಲಿದೆ. ಭದ್ರಾವತಿ ಎಫ್.ಎಂ ಕೇಂದ್ರದ ಕಾರ್ಯಕ್ರಮಗಳು ಮಧ್ಯ ಕರ್ನಾಟಕ ಭಾಗ ಮತ್ತು ಮಂಗಳೂರು ತನಕ ತಲುಪಲಿದೆ ಎಂದರು.
.jpeg)
ಭದ್ರಾವತಿ ಕೇಂದ್ರದ ಗೋಪುರವು 100 ಮೀಟರ್ ಎತ್ತರವಿದೆ. ಶಿವಮೊಗ್ಗದಲ್ಲಿರುವ ದೂರದರ್ಶನದ ಗೋಪುರ 150 ಮೀಟರ್ ಎತ್ತರವಿದೆ. ಹಾಗಾಗಿ ದೂರದರ್ಶನ ಗೋಪುರದ ಮೇಲೆ ಎಫ್.ಎಂ ಟ್ರಾನ್ಮೀಟರ್ (FM Transmitter) ಅಳವಡಿಸಲಾಗುತ್ತದೆ. ಆದರೆ ಆಕಾಶವಾಣಿ ಕೇಂದ್ರ ಭದ್ರಾವತಿಯಲ್ಲಿಯೆ ಇರಲಿದೆ. ಅಲ್ಲಿಯೆ ಕಾರ್ಯಕ್ರಮಗಳ ರೆಕಾರ್ಡಿಂಗ್ ನಡೆಯಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – GOOD NEWS | ಬೆಂಗಳೂರು – ಶಿವಮೊಗ್ಗ ವಿಮಾನದ ಟಿಕೆಟ್ ರೇಟ್ ಇಳಿಕೆ, ಈವರೆಗೂ ಎಷ್ಟಾಗಿದೆ ಬುಕಿಂಗ್?
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಎಸ್.ದತ್ತಾತ್ರಿ, ಮಾಲತೇಶ್, ಸಂತೋಷ್ ಬಳ್ಳೆಕೆರೆ ಮತ್ತಿತರರು ಇದ್ದರು.

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











