ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 1 AUGUST 2023
HOSANAGARA : ಯುವಕರ (Youths) ಗುಂಪೊಂದು ನಡುರಾತ್ರಿ ಉಪನ್ಯಾಸಕರೊಬ್ಬರ ಮನೆಗೆ ನುಗ್ಗಲು ಯತ್ನಿಸಿದೆ. ಬಾಗಿಲು ಒಡೆದು ಒಳ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದೆ ಎಂದು ಆರೋಪಿಸಲಾಗಿದೆ.
ಹೊಸನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿರುವ ಉಪನ್ಯಾಸಕ ಅಂಜನ್ ಕುಮಾರ್ ಮನೆ ಮೇಲೆ 10 ರಿಂದ 15 ಯುವಕರು ದಾಳಿ ನಡೆಸಿದ್ದಾರೆ.
ಏನಿದು ಪ್ರಕರಣ?
ಜು.29ರ ರಾತ್ರಿ 12 ಗಂಟೆ ಹೊತ್ತಿಗೆ ಉಪನ್ಯಾಸಕ ಅಂಜನ್ ಕುಮಾರ್ ಮನೆ ಕಾಂಪೌಂಡ್ ಒಳಗೆ ಯುವಕರ ಗುಂಪು ಅತಿಕ್ರಮ ಪ್ರವೇಶ ಮಾಡಿದೆ. ಮನೆಯೊಳಗೆ ಮುಸ್ಲಿಂ ಯುವತಿಯನ್ನು ಇರಿಸಿಕೊಂಡಿದ್ದೀಯ ಬಾಗಿಲು ತೆಗಿ ನಾವು ನೋಡಬೇಕು ಎಂದು ಉಪನ್ಯಾಸಕನಿಗೆ ಒತ್ತಾಯಿಸಿದ್ದಾರೆ. ಉಪನ್ಯಾಸಕ ನಿರಾಕರಿಸಿದಾಗ, ಬಾಗಿಲು ಒಡೆದು ಒಳಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಯುವಕರ ಗುಂಪು ಬೆದರಿಕೆ ಒಡ್ಡಿದೆ ಎಂದು ಉಪನ್ಯಾಸಕ ದೂರಿನಲ್ಲಿ ಆರೋಪಿಸಿದ್ದಾರೆ.
.jpeg)
ಮಾಲೀಕ, ಪೊಲೀಸರಿಂದ ಪರಿಶೀಲನೆ
ಯುವಕರ (Youths) ಗುಂಪು ದಾಳಿ ನಡೆಸಿರುವ ವಿಚಾರ ತಿಳಿಯುತ್ತಿದ್ದಂತೆ ಮನೆ ಮಾಲೀಕ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಯುವಕರ ಆರೋಪದ ಹಿನ್ನೆಲೆ ಉಪನ್ಯಾಸಕ ಅಂಜನ್ ಕುಮಾರ್ ಅವರ ಮನೆಯ ಪರಿಶೀಲನೆ ನಡೆಸಿದರು. ಮನೆಯಲ್ಲಿ ಯಾರು ಇರಲಿಲ್ಲ. ಈ ಹಿನ್ನೆಲೆ ಯುವಕರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ. ಈ ವೇಳೆ ಯುವಕರು ಪುನಃ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಉಪನ್ಯಾಸನ ದೂರಿನಲ್ಲಿ ಆಪಾದಿಸಿದ್ದಾರೆ.
ಹೊಸನಗರ ಠಾಣೆಯಲ್ಲಿ ಮಂಜುನಾಥ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






