ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 1 AUGUST 2023
SHIMOGA : ಸೋಗಾನೆ ವಿಮಾನ ನಿಲ್ದಾಣ (Airport) ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಈ ಹಿನ್ನಲೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಬಾಕಿ ಇರುವ ಬಿಲ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು ಮತ್ತು ಕಾಂಗ್ರಸ್ ನಾಯಕರು, ವಿಮಾನ ನಿಲ್ದಾಣ ಕಾಮಗಾರಿಯ ಪರಿಷ್ಕೃತ ಮೊತ್ತದಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪರಿಷ್ಕೃತ ಮೊತ್ತದ ಬಗ್ಗೆ ಅನುಮಾನ
ವಿಮಾನ ನಿಲ್ದಾಣ (Airport) ಕಾಮಗಾರಿಗೆ ಆರಂಭದಲ್ಲಿ 220 ಕೋಟಿ ರೂ. ಅಂದಾಜು ವೆಚ್ಚ ನಿಗದಿಪಡಿಸಲಾಗಿತ್ತು. ಆಮೇಲೆ ಅಂದಾಜು ವೆಚ್ಚ ಪರಿಷ್ಕರಿಸಿ 449.22 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದರ ಕುರಿತು ತನಿಖೆ ಆಗಬೇಕಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಕಮಿಷನರ್ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ ತಾಕ್ರಾ ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಪ್ಪ ಸೇರಿದಂತೆ ಹಲವರು ಇದ್ದರು.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





