SHIVAMOGGA LIVE NEWS | 8 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಮ್ಯಾನ್ ಹೋಲ್ ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು.
ಸಾಗರ (Sagara) ನಗರದ ಮಾರ್ಕೆಟ್ ರಸ್ತೆಯ ಕೋಮಲ್ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್ಹೋಲ್ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಮ್ಯಾನ್ ಹೋಲ್ ಮುಚ್ಚಳ ಸರಿಪಡಿಸುವಂತೆ ಸ್ಥಳೀಯರು ನಗರಸಭೆಗೆ ಮನವಿ ಮಾಡಿದರು ಪ್ರಯೋಜವಾಗಲಿಲ್ಲ.
ಇದನ್ನೂ ಓದಿ- ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ
ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ವ್ಯಾಪಾರಿ ಶಿವಾನಂದ ಕಾಮತ್ ಮತ್ತು ಕೋಮಲ್ ರಾಘವೇಂದ್ರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಗುಂಡಿ ಸುತ್ತಲು ಕಲ್ಲುಗಳನ್ನು ಇರಿಸಿ, ಕೆಂಪು ಧ್ವಜ ನೆಟ್ಟು ಪ್ರತಿಭಟಿಸಿದರು. ವಾಹನ ಸವಾರರಿಗೆ ಗುಂಡಿ ಇದೆ ಎಂದು ಗೊತ್ತಾಗಲಿ ಎಂದು ಕೆಂಪು ಧ್ವಜ ನೆಡಲಾಗಿದೆ. ಇನ್ನಾದರು ಮ್ಯಾನ್ ಹೋಲ್ ಮುಚ್ಚಳ ಸರಿಪಡಿಸಲಿ ಎಂದು ಆಗ್ರಹಿಸಿದರು.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






