ಕುವೆಂಪು ವಿವಿ ಕುಲಸಚಿವರ ದಿಢೀರ್‌ ಬದಲಾವಣೆ, ಹೊಸ ರಿಜಿಸ್ಟ್ರಾರ್‌ ಅಧಿಕಾರ ಸ್ವೀಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHANKARAGHATTA : ಐಎಎಸ್‌ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್‌ ಸುಧಾಕರ್‌ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು.

ಈಚೆಗಷ್ಟೆ ಪ್ರೊ. ಕಣ್ಣನ್‌ ನೇಮಕವಾಗಿತ್ತು

ಇತ್ತೀಚೆಗಷ್ಟೆ ಕುವೆಂಪು ವಿವಿಯ ಕುಲಸಚಿವರಾಗಿ (Registrar)  ಪ್ರೊ. ಪಿ.ಕಣ್ಣನ್‌ ಅವರು ನೇಮಿಸಲಾಗಿತ್ತು. ಜು.28ರಂದು ಪ್ರೊ. ಕಣ್ಣನ್‌ ಅವರು ಅಧಿಕಾರ ವಹಿಸಿಕೊಂಡಿದ್ದರು. ಉಪನ್ಯಾಸಕರೊಬ್ಬರನ್ನು ಕುಲಸಚಿವ ಸ್ಥಾನಕ್ಕೆ ನೇಮಕ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ ಕುಲಸಚಿವರನ್ನು ದಿಢೀರ್‌ ಬದಲಾವಣೆ ಮಾಡಿದ್ದು ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ಕೆಎಎಸ್‌ ಅಧಿಕಾರಿಯನ್ನು ಕುಲುಸಚಿವರನ್ನಾಗಿ ನೇಮಿಸಲಾಗುತ್ತಿತ್ತು.3

ಇದನ್ನೂ ಓದಿ – ವೆರೈಟಿ ಡ್ರೆಸ್‌, ಬಗೆಬಗೆ ಸ್ಟೈಲ್‌, ಶಿವಮೊಗ್ಗದಲ್ಲಿ ಜೋರಿತ್ತು ವಿಜ್ಞಾನ ವಿದ್ಯಾರ್ಥಿಗಳ ಟ್ರೆಡೀಷನಲ್‌ ಡೇ ಸೆಲಬ್ರೇಷನ್‌

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment