SHIVAMOGGA LIVE NEWS | 9 AUGUST 2023
SHIMOGA : ಗುಡ್ಡೇಕಲ್ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಆಡಿಕೃತ್ತಿಕೆ ಜಾತ್ರೆ (Harohara Jathre) ವಿಜೃಂಭಣೆಯಿಂದ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು ದೇವರಿಗೆ ಹರಕೆ ತೀರಿಸಿದರು. ಇವತ್ತಿನ ಜಾತ್ರೆ ವೈಭವದ ಫೋಟೊ ಆಲ್ಬಂ ಇಲ್ಲಿದೆ.
ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು.
ಆಡಿಕೃತ್ತಿಕೆ ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ.
ಜಾತ್ರೆ ಹಿನ್ನೆಲೆ ಮಹಿಳೆಯರು, ಮಕ್ಕಳು ಸೇರಿದಂತೆ ದೊಡ್ಡ ಸಂಖ್ಯೆಯ ಭಕ್ತರು ಕಾವಡಿ ಹೊತ್ತು ಬಂದು ಹರಕೆ ತೀರಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆ ಶುರು, ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಬರ್ತಿದ್ದಾರೆ ಭಕ್ತರು
ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಆದಿಚುಂಚನಗಿರಿ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಭೇಟಿ ನೀಡಿದ್ದರು. ಈ ವೇಳೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200