ಹೊಳೆಹೊನ್ನೂರಿನಲ್ಲಿ ಶ್ರೀಗಳ ಆಶೀರ್ವಚನ, ಎಲ್ಲವನ್ನೂ ದೇವರಿಗೆ ಅರ್ಪಿಸಿ ಅನುಭವಿಸಬೇಕು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

HOLEHONNURU : ಭಗವಂತನಿಗೆ ಭಕ್ತರ (Devotees) ಮೇಲೆ ಅಪಾರ ಔದಾರ್ಯವಿದೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು.

28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು. ಅನ್ನ, ವಸ್ತ್ರ, ಜೀವನ ಎಲ್ಲವನ್ನೂ ಕೊಟ್ಟು ಸಲಹಿದ್ದಾನೆ.  ಅನ್ನ ಕೊಟ್ಟು ಹೊಟ್ಟೆ ತುಂಬಿಸಿದ್ದಾನೆ. ವಸ್ತ್ರವನ್ನು ನೀಡಿ ಮಾನ ಕಾಪಾಡಿದ್ದಾನೆ. ಜೀವನವನ್ನು ಕೊಟ್ಟು ಸುಖ ಅನುಭವಿಸಲೂ ಅವಕಾಶ ನೀಡಿದ್ದಾನೆ. ಆದರೆ ನಾವು (Devotees) ಎಲ್ಲವನ್ನೂ ದೇವರಿಗೆ ಅರ್ಪಿಸಿ ಅನುಭವಿಸಬೇಕು. ಆ ಕೃತಜ್ಞತೆ ನಮಗೆ ಇರಬೇಕು ಎಂದರು.

ಪ್ರಚವನ ನೀಡಿದ ಪಂಡಿತ ಭಾರತೀರಮಣಾಚಾರ್ಯ ಗಣಾಚಾರ್ಯ, ಜೀವನದಲ್ಲಿ ನಮಗೆ ದೇವರಲ್ಲಿ ಭಕ್ತಿ ಮತ್ತು ವಿಷಯ ಪದಾರ್ಥಗಳಲ್ಲಿ ವೈರಾಗ್ಯ ಇರಬೇಕು. ಆದರೆ ನಾವು ಇದಕ್ಕೆ ವ್ಯತಿರಿಕ್ತವಾಗಿ ಬದುಕುತ್ತೇವೆ. ನಮಗೆ ದೇವರ ಬಗ್ಗೆ ವೈರಾಗ್ಯ ಮತ್ತು ಲೌಖಿಕದಲ್ಲಿ ಆಸಕ್ತಿ ಇರುತ್ತದೆ. ಇದು ನಮ್ಮ ಸಾಧನೆಗೆ ಇರುವ ದೊಡ್ಡ ಪ್ರತಿಬಂಧಕ ಎಂದರು.

ಇದನ್ನೂ ಓದಿ – ಕೇಂದ್ರ ಸಚಿವರನ್ನು ಭೇಟಿಯಾದ ಶಿವಮೊಗ್ಗ ಸಂಸದ, ಮೆಕ್ಕೆಜೋಳ ಕುರಿತು ಮಹತ್ವದ ಮನವಿ, ಏನಿದೆ ಮನವಿಯಲ್ಲಿ?

ಅರ್ಥವೇ ಇಂದು ಅನರ್ಥಕ್ಕೆ ಕಾರಣ ಆಗುತ್ತಿದೆ. ಒಬ್ಬರಿಗೆ ನೋವು ಕೊಟ್ಟು, ಬಲವಂತದಿಂದ ಪಡೆದ, ಶ್ರಮರಹಿತವಾದ ಹಣ ನಮ್ಮ ಅವನತಿಗೆ ಕಾರಣವಾಗುತ್ತದೆ. ಅದೇ ರೀತಿ ವಿಷಯ ಕಾಮನೆಗಳು ನಮ್ಮ ಅಧಃಪತನಕ್ಕೆ ಕಾರಣವಾಗುತ್ತದೆ ಎಂದರು.

ಬರೋಡದ ವಸಂತಾಚಾರ್ಯ ಜಹಗೀರ್‌ದಾರ್, ಶ್ರೀನಿ ಆಚಾರ್ ಬಲ್ಲರವಾಡಿ ಪ್ರವಚನ ನೀಡಿದರು. ಒರಿಸ್ಸಾದ ಜಗನ್ನಾಥ ಪುರಿ ಕ್ಷೇತ್ರದ ನೀಲಮೇಘ ಶ್ಯಾಮ ಮತ್ತು ಜಗನ್ನಾಥನ ಪ್ರಸಾದವನ್ನು ಶ್ರೀಗಳಿಗೆ ಸಮರ್ಪಿಸಿದರು. ಕೊಪ್ಪರ ನರಸಿಂಹ ದೇವರ ಪ್ರಸಾದವನ್ನು ಕೂಡ ಇದೇ ವೇಳೆ ಶ್ರೀಗಳಿಗೆ ಸಮರ್ಪಿಸಲಾಯಿತು.

ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಕಾರ್ಯದರ್ಶಿ ಕೆ.ಎನ್. ಗುರುರಾಜ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ಮುರಳಿ, ಸತ್ಯನಾರಾಯಣ ನಾಡಿಗ್, ಧೃವಾಚಾರ್, ಗೋಪೀನಾಥ ನಾಡಿಗ್ ಮೊದಲಾದವರಿದ್ದರು.

PARISHRAMA neet academy

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment