SHIVAMOGGA LIVE NEWS | 11 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಭಕ್ತರ ಆರೋಪವೇನು?
ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು ಹಾನಿ ಮಾಡಿ ಹೊರಗೆ ಬಿಸಾಕಿದ್ದಾರೆ. ಕಳ್ಳತನ ಮಾಡುವ ಉದ್ದೇಶವಾಗಿದ್ದರೆ ಹುಂಡಿ ಒಡೆಯಬೇಕಿತ್ತು. ಆದರೆ ದೇವಿಯ ಮೂರ್ತಿಗೆ ಹಾನಿ ಮಾಡಲಾಗಿದೆ. ಈ ಹಿಂದೆಯೂ ದೇವಸ್ಥಾನದಲ್ಲಿ ಈ ರೀತಿಯ ಘಟನೆ ನಡೆದಿರುವ ಬಗ್ಗೆ ಹಿರಿಯರು ಹೇಳುತ್ತಾರೆ. ಈ ಘಟನೆಯಿಂದ ಸಮಾಜದ ಸಾಮರಸ್ಯ ಕೆಡಿಸುವ ದುಷ್ಟ ಶಕ್ತಿಗಳಿವೆಯೇ ಎಂಬ ಅನುಮಾನ ಕಾಡುತ್ತಿದೆ.
ಇದನ್ನೂ ಓದಿ – ರಸ್ತೆ ಬದಿ ಹೊಂಡಕ್ಕೆ ಜಾರಿದ KSRTC ಬಸ್, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ
ವಿಶೇಷ ತಂಡ ರಚಿಸಿ
ಚಂದ್ರಗುತ್ತಿ ದೇವಿ ದೇವಾಲಯದಲ್ಲಿ ನಡೆದ ಘಟನೆಯಿಂದ ನಮ್ಮ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಪ್ರಕರಣದ ಕೂಲಂಕಷ ತನಿಖೆಗೆ ವಿಶೇಷ ತಂಡ ರಚಿಸಿ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿ ಸ್ವೀಕರಿಸಿದ ಎಸ್ಪಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಆರ್.ಶ್ರೀಧರ್ ಹುಲ್ತಿಕೊಪ್ಪ, ಎಸ್.ಸಿ ರಾಮಚಂದ್ರ, ಮಧುಗಣಪತಿ ಮಡೆನೂರು, ಪ್ರೊ.ಕಲ್ಲನ, ಕಾಗೋಡು ರಾಮಪ್ಪ, ಉದಯ್ಕುಮಾರ್, ಶೆಟ್ಟಿಹಳ್ಳಿ ಸುಧಾಕರ್, ತೇಕಲೆ ರಾಜಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






