ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್‌, ಇಲ್ಲಿದೆ 6 ಪ್ರಮುಖ ಪಾಯಿಂಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 AUGUST 2023

SHIMOGA : ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ‍(Flag Hoisting) ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ (Independence Day Speech) ನೀಡಿದರು.

ಸಂದೇಶದ ಪ್ರಮುಖ 6 ಪಾಯಿಂಟ್‌ ಇಲ್ಲಿದೆ

POINT 1 jpgಮುಂಗಾರು ಮಳೆ ವಿಳಂಬವಾಗಿದೆ. ಜಿಲ್ಲೆಯಲ್ಲಿ ಈವರೆಗು ಕಡಿಮೆ ಮಳೆಯಾಗಿದೆ. ರೈತರ ನಿರೀಕ್ಷೆಯಂತೆ ಹಿಂಗಾರು ಮಳೆ ಬರುವ ಆಶಾ ಭಾವನೆ ಇದೆ. ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಂತ್ರಸ್ಥರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.

POINT 2 jpgಶಾಲೆಗಳ ಆರಂಭದ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಶೂಗಳನ್ನು ಪೂರೈಸಲಾಗಿದೆ. ಈ ಹಿಂದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರಕ್ಕೆ 1 ಮೊಟ್ಟೆ ನೀಡುತ್ತಿದ್ದು, ಈಗ ವಾರಕ್ಕೆ 2 ಮೊಟ್ಟೆ ನೀಡಲಾಗುತ್ತದೆ. 10ನೇ ತರಗತಿವರೆಗೆ ಈ ಯೋಜನೆ ವಿಸ್ತರಿಸಲಾಗಿದೆ. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ 2 ಬಾರಿ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದರಿಂದ ಉನ್ನತ ಶಿಕ್ಷಣಕ್ಕೆ ಸೇರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿಕ್ಷಕರ ನೇಮಕಾತಿ, ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ.

Minister-Madhu-Bangarappa-In-Shimoga-Independence-Day

POINT 3 jpgಹಲವು ದಶಕಗಳಿಂದ ಕಗ್ಗಂಟಾಗಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುತ್ತದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಶೀಘ್ರದಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಭೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ.

POINT 4 jpgಅಡಿಕೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ. ಎಲೆಚುಕ್ಕೆ ರೋಗ ಬೆಳೆಗಾರರಲ್ಲಿ ಆತಂಕ ತಂದೊಡ್ಡಿದೆ. ಮಾರುಕಟ್ಟೆ ಅಸ್ಥಿರತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಜಿಲ್ಲೆಯಲ್ಲಿ ಭತ್ತದ ಬೆಳೆ ಕಡಿಮೆಯಾಗುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ, ವಿವಿಧೆಡೆ ಧ್ವಜಾರೋಹಣ

POINT 5 jpgಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಜನರ ಬಹುದಿನಗಳ ಬೇಡಿಕೆಯಂತೆ ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಪ್ರಸ್ತಾಪಿಸಲಾಗಿರುವ ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ವಿಶೇಷ ಗಮನ ಹರಿಸಲಾಗುತ್ತದೆ.

POINT 6 jpgಗ್ರಾಮೀಣ ಭಾಗದ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಿ, ಅತ್ಯಾಧುನಿಕ ಹಾಗೂ ಸುಸಜ್ಜಿತ ಇ-ಲೈಬ್ರರಿಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಗತಿಯಲ್ಲಿದೆ. ಇದರಿಂದಾಗಿ ಗ್ರಾಮೀಣ ಜನರ ಬೌದ್ಧಿಕ ವಿಕಾಸಗೊಳಿಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment