ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 AUGUST 2023
SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ (Special Rituals) ಪೂಜೆ ಹಾಗೂ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹೋಮ ನೆರವೇರಿದವು. ಆ.2ರಂದು ದುಷ್ಕರ್ಮಿಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಕಳ್ಳತನ ಪ್ರಯತ್ನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ಮೊದಲನೇ ದಿನ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಕಾರ್ಯಕ್ರಮಗಳು ನಡೆದವು.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮೂವರು ಅರೆಸ್ಟ್, ವಿಚಾರಣೆ ವೇಳೆ ಹೇಳಿದ್ದೇನು?
ಅಮ್ಮನವರಿಗೆ ಶಕ್ತಿ ತುಂಬುವ ರೂಪದಲ್ಲಿ ಇಲ್ಲಿನ ಯಾಗ ಶಾಲೆಯಲ್ಲಿ ನವಗ್ರಹ ಪೂರ್ವಕ ಸಂಪ್ರೋಕ್ಷಣೆ ಹಾಗೂ ಕಲಾವೃದ್ಧಿ, ನವಚಂಡಿ ಹೋಮ, ದೇವಿಯ ಮರು ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಪೂಜ ಕೈಂಕರ್ಯಗಳು ಜರುಗಿದವು.

ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ಸಿದ್ದಾಪುರದ ಅನಂತ್ ಭಟ್ ರಾಯ್ಕರ್, ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ್ ಭಟ್, ದೇವಾಲಯದ ತಾಂತ್ರಿಕ ಕೆಳದಿ ರಾಮ ಭಟ್ ನೆರವೇರಿಸಿದರು. ವಿಶೇಷ ತಳಿರು ತೋರಣ ಹಾಗೂ ಬಗೆ ಬಗೆಯ ಹೂವಿನ ಅಲಂಕಾರ ಮಾಡಲಾಗಿತ್ತು, ಭಕ್ತರಿಗೆ ಅನ್ನದಾಸೋಹ ಸೇವೆ ನಡೆಯಿತು.
.jpeg)
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















