SHIVAMOGGA LIVE NEWS | 25 AUGUST 2023
HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ (Protest) ನಡೆಸಿದರು.
ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ನಾಡ ಕಚೇರಿಗೆ MLA ದಿಢೀರ್ ಭೇಟಿ, ಅಧಿಕಾರಿಗಳಿಗೆ ಫುಲ್ ಕ್ಲಾಸ್
ಶಾಲೆಗೆ (School) ಬೀಗ ಹಾಕಿ ಕಟ್ಟಡದ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಕ್ಕಳು ಕೂಡ ಶಾಲೆಯಿಂದ ಹೊರಗೆ ಕುಳಿತಿದ್ದರು. ಸಮಸ್ಯೆ ಕುರಿತು ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಾಗಿದ್ದೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200