ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ವರ ಮಹಾಲಕ್ಷ್ಮಿ ಹಬ್ಬ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಅಲಂಕಾರ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 AUGUST 2023

Shivamogga-Live-Number-1-Website

SHIMOGA : ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ವರ ಮಹಾಲಕ್ಷ್ಮಿ ವ್ರತ (Varamahalakshmi Festival) ಆಚರಣೆ ಮಾಡಲಾಯಿತು. ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇನ್ನು, ಹಲವು ಕಡೆ ಮನೆ, ಮಳಿಗೆ, ಕಚೇರಿಗಳಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.

Varamahalakshmi Festival in Shimoga city

ಎಲ್ಲೆಲ್ಲಿ ಹೇಗಿದೆ ಪೂಜೆ?

ನಗರದ ವಿವಿಧೆಡೆ ಮನೆಗಳಲ್ಲಿ ಲಕ್ಷ್ಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿವಿಧ ಬಗೆಯ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಹಲವು ಬಗೆಯ ತಿಂಡಿ, ತಿನಿಸು, ಹಣ್ಣುಗಳನ್ನು ದೇವಿಗೆ ಅರ್ಪಿಸಲಾಯಿತು.

Varamahalakshmi Festival in Shimoga city

ವರ ಮಹಾಲಕ್ಷ್ಮಿಯು ಆಯುರ್‌ ಆರೋಗ್ಯ, ಐಶ್ವರ್ಯ ಇತ್ಯಾದಿಗಳನ್ನು ಪ್ರತಿಬಿಂಬಿಸುತ್ತಾಳೆ. ಅಲಂಕಾರ ಪ್ರಿಯೆ ಅಂತಾ ಹೇಳುತ್ತಾರೆ. ನಮ್ಮ ಮನೆಯಲ್ಲಿ 25 ವರ್ಷದಿಂದ ಬೇರೆ ಬೇರೆ ರೂಪದಲ್ಲಿ ಅಲಂಕಾರ ಮಾಡಿ ಪೂಜೆ ಮಾಡುತ್ತಿದ್ದೇವೆ. ಈ ಬಾರಿ ಮತ್ಸ್ಯಕನ್ಯೆ ರೂಪದಲ್ಲಿ ಅಲಂಕಾರ ಮಾಡಿದ್ದೇವೆ.ಇಂಪನಾ, ತಿಲಕನಗರ ಮೊದಲ ತಿರುವಿನ ನಿವಾಸಿ

Varamahalakshmi Festival in Shimoga city

ವರ ಮಹಾಲಕ್ಷ್ಮಿ ಪೂಜೆ ತುಂಬಾ ವಿಶೇಷ. ಈ ಬಾರಿ ನಾವು ಗಜ ಲಕ್ಷ್ಮಿ ರೂಪದ ಅಲಂಕಾರ ಮಾಡಿದ್ದೇವೆ. ಎರಡು ಬದಿಯಲ್ಲಿ ಆನೆಗಳನ್ನು ಇರಿಸಿ ಅಲಂಕಾರಿಸಿದ್ದೇವೆ. ನೆರೆ ಹೊರೆಯವರು, ಸ್ನೇಹಿತೆಯರು, ಸಂಬಂಧಿಕರನ್ನು ಕರೆದು ಉಡಿ ತುಂಬಿ, ಅರಿಶಿಣ ಕುಂಕುಮ ಕೊಡುತ್ತೇವೆ.ವೀಣಾ ದತ್ತಾತ್ರಿ, ಶರಾವತಿ ನಗರ ನಿವಾಸಿ

Varamahalakshmi Festival in Shimoga city

ವಿವಿಧೆಡೆ ವ್ಯಾಪಾರ ಸ್ಥಳಗಳಲ್ಲಿಯು ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಅಂಗಡಿಗಳು, ಕಚೇರಿಗಳಲ್ಲಿ ಲಕ್ಷ್ಮಿ ಪೂಜೆಯನ್ನು ಶ್ರದ್ಧೆಯಿಂದ ನೆರವೇರಿಸಲಾಯಿತು.

ದೇಗುಲಗಳಲ್ಲಿ ವಿಶೇಷ ಪೂಜೆ

ವರ ಮಹಾಲಕ್ಷ್ಮಿ ವ್ರತದ (Varamahalakshmi Festival) ಹಿನ್ನೆಲೆ ನಗರದ ವಿವಿಧೆಡೆ ದೇಗುಲಗಳಲ್ಲಿಯು ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಕೋಟೆ ಶ್ರೀ ಮಾರಿಕಾಂಬ ದೇವಿಯ ದೇಗುಲದಲ್ಲಿ ದೇವಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಗದ್ದುಗೆಗೆ ನಮಸ್ಕರಿಸಿ ಆಶೀರ್ವಾದ ಬೇಡಿದರು.

Varamahalakshmi Festival in Shimoga city

ಇನ್ನು, ಧಾರ್ಮಿಕ ದತ್ತಿ ವ್ಯಾಪ್ತಿಯ ದೇಗುಲಗಳಲ್ಲಿ ಸರ್ಕಾರದ ವತಿಯಿಂದ ಇವತ್ತು ಮಹಿಳೆಯರಿಗೆ ಬಳೆ, ಅರಿಶಿಣ, ಕುಂಕುಮವನ್ನು ಪ್ರಸಾದದ ರೂಪದಲ್ಲಿ ನೀಡಲಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಳೆಗಟ್ಟಿದ ವರ ಮಹಾಲಕ್ಷ್ಮಿ ಹಬ್ಬ, ಹೂವು, ಹಣ್ಣು ಖರೀದಿ ಜೋರು, ಎಷ್ಟಿದೆ ಬೆಲೆ?

Varamahalakshmi Festival in Shimoga city | Chandragutti Temple

ಚಂದ್ರಗುತ್ತಿಗೆ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಅರಿಶಿಣ ಕುಂಕುಮ, ಬಳೆ ಪ್ರಸಾದದ ರೂಪದಲ್ಲಿ ನೀಡಲಾಯಿತು. ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ಕಾರ್ಯನಿರ್ವಾಹಣಧಿಕಾರಿ ಶಿವಪ್ರಸಾದ್, ಅರವಿಂದ್ ಅರ್ಚಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಕೃಷ್ಣ, ಸಮಿತಿಯ ಸದ್ಯಸ್ಯರಾದ ಲಲಿತಾ ಎಂ ಶೆಟ್ಟಿ, ಶಿವಶಂಕರ ಗೌಡ, ಗ್ರಾಮಸ್ಥರಾದ ಕೃಷ್ಣ,ಸಿಬ್ಬಂದಿ ಪ್ರಕಾಶ್, ಮಂಜಪ್ಪ, ಪೊಲೀಸ್‌ ಇಲಾಖೆಯ ಸಂದೀಪ್ ಮತ್ತಿತರರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2023

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

Leave a Comment