SHIVAMOGGA LIVE NEWS | 26 AUGUST 2023
SHIKARIPURA : ಈದ್ ಮಿಲಾದ್ ಹಬ್ಬ ಆಚರಣೆ ಕಮಿಟಿ ಅಧ್ಯಕ್ಷ ಸ್ಥಾನದ (President Post) ವಿಚಾರವಾಗಿ ಜಗಳ ನಡೆದು ಸಭೆಯಲ್ಲೇ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಗಲಾಟೆ, ಚಾಕು ಚುಚ್ಚಿ ಕೊಲೆ
ಆ.21ರಂದು ಶಿಕಾರಿಪುರದ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆಯುತ್ತಿದ್ದ ಸಭೆ ಮಧ್ಯೆ (President Post) ಗಲಾಟೆಯಾಗಿದೆ. ಈ ವೇಳೆ ಜನ್ನತ್ ಗಲ್ಲಿಯ ಮೊಹಮ್ಮದ್ ಜಾಫರ್ (32) ಎಂಬಾತನಿಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಏಳು ಆರೋಪಿಗಳು ಅರೆಸ್ಟ್
ತನಿಖೆ ನಡೆಸಿದ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆ.22ರಂದು ಸೊಸೈಟಿ ಕೇರಿಯ ಬಾಷಾ (42) ಎಂಬಾತನನ್ನು ಬಂಧಿಸಲಾಗಿತ್ತು. ಆ.25ರಂದು ರೋಷನ್ (19), ಸದ್ದಾಂ ಹುಸೇನ್ (31), ಸಲ್ಮಾನ್ ಅಲಿಯಾಸ್ ಸಲೀಂ (22), ಇಮ್ರಾನ್ (30), ಆರೀಫ್ ಜಾನ್ (33) ಮತ್ತು ಎಸ್.ಎನ್. ಬಾಬು ಅಲಿಯಾಸ್ ಸಾಬಿರ್ ಅಹಮ್ಮದ್ (42) ಬಂಧಿತರು.
ಈದ್ ಮಿಲಾದ್ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಶಿಕಾರಿಪುರದ ಸೊಸೈಟಿ ಕೇರಿ ಮತ್ತು ಗಗ್ರಿ ಏರಿಯಾದವರ ಮಧ್ಯೆ ವೈಮನಸು ಸೃಷ್ಟಿಯಾಗಿತ್ತು. ಇದೇ ವಿಚಾರದಲ್ಲಿ ಆ.21ರಂದು ಗಲಾಟೆಯಾಗಿತ್ತು.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದ ಆರೋಪಿಗಳನ್ನು ಬಂಧಿಸಲಾಗಿದೆ. ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಶಿವಾನಂದ ಮದರಖಂಡಿ, ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ರುದ್ರೇಶ ನೇತೃತ್ವದಲ್ಲಿ, ಪಿಎಸ್ಐಗಳಾದ ಪ್ರಶಾಂತ್ ಕುಮಾರ್, ರಾಜುರೆಡ್ಡಿ, ಕೋಮಲಾಚಾರ್, ಶರತ್, ಎಎಸ್ಐ ಮಲ್ಲೇಶಪ್ಪ, ವಿಶ್ವನಾಥ್, ಸಿಬ್ಬಂದಿ ಹೆಚ್.ಸಿ.ಶಿವಕಮಾರ್, ಶಿವಾನಂದ ಗಾಮದ್, ಗಂಗಾಧರ ಅನಗವಾಡಿ, ಅಶೋಕ, ಪ್ರಶಾಂತ್, ಹಜರತ್ ಅಲಿ, ರಾಘವೇಂದ್ರ, ಕೊಟ್ರೇಶ, ಆದರ್ಶ, ಚನ್ನೇಶ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200