ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್‌, ರೈಲ್ವೆ ನಿಲ್ದಾಣಕ್ಕೆ ಯಾಕಿಲ್ಲ ಇಂತಹ ಸರ್ವಿಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 SEPTEMBER 2023

SHIMOGA : ವಿಮಾನ ಹಾರಾಟ ಶುರುವಾಗುತ್ತಿದ್ದಂತೆ ಕೆಎಸ್‌ಆರ್‌ಟಿಸಿ ವತಿಯಿಂದ ಸೋಗಾನೆ ವಿಮಾನ ನಿಲ್ದಾಣಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಅರ್ಧ ಗಂಟೆಗೆ ಒಮ್ಮೆ ಈ ಮಾರ್ಗದಲ್ಲಿ KSRTC ಬಸ್ಸು  ಸಂಚರಿಸಲಿದೆ. ಆದರೆ ನಿತ್ಯ ಸಾವಿರಾರು ಜನರು ಪ್ರಯಾಣಿಸುವ ರೈಲ್ವೆ ನಿಲ್ದಾಣಕ್ಕೆ ಸಾರಿಗೆ ನಿಗಮ ಬಸ್ಸುಗಳನ್ನು ಒದಗಿಸದಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ವಿಮಾನ ನಿಲ್ದಾಣಕ್ಕೆ ಬಸ್ಸುಗಳು

ಆ.31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಆರಂಭವಾಗಿದೆ. ಸದ್ಯ ಒಂದು ವಿಮಾನ ಹಾರಾಟ ನಡೆಸುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ – ವಿಮಾನ ನಿಲ್ದಾಣ – ಕಾಚಿನಕಟ್ಟೆ ಮಾರ್ಗದಲ್ಲಿ KSRTC ಬಸ್‌ ಸಂಚಾರ ಆರಂಭಿಸಲಾಯಿತು. ಬೆಳಗ್ಗೆಯಿಂದ ಸಂಜೆವರೆಗೆ ಪ್ರತಿ ಅರ್ಧ ಗಂಟೆಗೆ ಒಂದು ಬಸ್‌ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಈ ಭಾಗದ ಕಾಚಿನಕಟ್ಟೆ, ಕೊರ್ಲಹಳ್ಳಿ, ಸಂತೆ ಕಡೂರು, ಪುಟ್ಟಪ್ಪ ಕ್ಯಾಂಪ್‌, ಒಡ್ಡಿನಕೊಪ್ಪ, ಜ್ಯೋತಿನಗರ, ಎಂಆರ್‌ಎಸ್‌ ಭಾಗದ ಜನರಿಗೆ ಅನುಕೂಲವಾಗಲಿದೆ.

ವಿಮಾನ ನಿಲ್ದಾಣಕ್ಕೆ ಎಂದು ಪ್ರತ್ಯೇಕವಾಗಿ ಬಸ್‌ ಬಿಡಲು ಸಾಧ್ಯವಿಲ್ಲ. ಕಾಚಿನಕಟ್ಟೆ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಿದ್ದೇವೆ. ವಿಮಾನ ಬರುವ ಸಂದರ್ಭ ಮಾತ್ರ ವಿಮಾನ ನಿಲ್ದಾಣದ ಒಳಗೆ ಹೋಗುತ್ತದೆ. ಉಳಿದ ಸಂದರ್ಭ ಮುಖ್ಯ ರಸ್ತೆಯಲ್ಲಿ ಸಂಚರಿಸಲಿದೆ.ವಿಜಯ ಕುಮಾರ್‌, ಜಿಲ್ಲಾ ಅಧಿಕಾರಿ, ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ

ರೈಲ್ವೆ ನಿಲ್ದಾಣಕ್ಕೆ ಇಲ್ಲ ಬಸ್‌

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ತಿರುಪತಿ, ಚೆನ್ನೈ ಜೊತೆಗೆ ಶಿವಮೊಗ್ಗ ಜಿಲ್ಲೆ ರೈಲ್ವೆ ಸಂಪರ್ಕ ಹೊಂದಿದೆ. ನಿತ್ಯ ಹತ್ತಕ್ಕು ಹೆಚ್ಚು ರೈಲುಗಳು ಶಿವಮೊಗ್ಗ ನಿಲ್ದಾಣಕ್ಕೆ ಬಂದು ಹೋಗುತ್ತವೆ. ಆದರೆ ರೈಲಿನಲ್ಲಿ ಬರುವ ಪ್ರಯಾಣಿಕರು ರೈಲ್ವೆ ನಿಲ್ದಾಣದಿಂದ KSRTC ಬಸ್‌ ವ್ಯವಸ್ಥೆ ಇಲ್ಲದಿರುವುದರಿಂದ ದುಬಾರಿ ಬೆಲೆ ತೆತ್ತು ಆಟೋಗಳಲ್ಲಿ ಸಂಚರಿಸಬೇಕಾಗಿದೆ.

ಶಿವಮೊಗ್ಗಕ್ಕೆ ರೈಲ್ವೆ ನಿಲ್ದಾಣಕ್ಕೆ ಬಂದಿಳಿದರೆ ಆಟೋದವರು ಕೇಳಿದ ಚಾರ್ಜ್‌ ಕೊಡಲು ಕಷ್ಟವಾಗುತ್ತೆ. ಅನಿವಾರ್ಯವಾಗಿ ಆಟೋ ಹತ್ತಬೇಕು. ಆದರೆ ಎಷ್ಟೋ ಜನ ನಡೆದುಕೊಂಡೆ ಹೋಗುತ್ತಾರೆ. ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ.ಆಂತೋನಿ ರಾಜ್‌, ಶಿವಮೊಗ್ಗ ನಿವಾಸಿ

Shimoga-City-Railway-Station

ನಿಲ್ದಾಣ ತಲುಪುವಷ್ಟರಲ್ಲಿ ಹೈರಾಣು

ಬೆಳಗ್ಗೆ 4.30ಕ್ಕೆ ಶಿವಮೊಗ್ಗ ತಲುಪುವ ಮೈಸೂರು ತಾಳಗುಪ್ಪ ಎಕ್ಸ್‌ಪ್ರೆಸ್‌, ಬೆಳಗ್ಗೆ ಹೊರಡುವ ಜನ ಶತಾಬ್ದಿ ರೈಲು, ರಾತ್ರಿ ಬೆಂಗಳೂರಿನಿಂದ ಬರುವ ಎಕ್ಸ್‌ಪ್ರೆಸ್‌ ಮತ್ತು ಜನ ಶತಾಬ್ದಿ ರೈಲು ಪ್ರಯಾಣಿಕರು ಮತ್ತು ರಾತ್ರಿ ಶಿವಮೊಗ್ಗದಿಂದ ತೆರಳುವ ತಾಳಗುಪ್ಪ ಮೈಸೂರು ಎಕ್ಸ್‌ಪ್ರೆಸ್‌ ರೈಲಿನ ಪ್ರಯಾಣಿಕರು ನಿಲ್ದಾಣ ತಲುಪಲು ಕಷ್ಟಪಡುತ್ತಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸುಗಳೇ ನಿಲ್ಲದ ಕಡೆ ಹೈಟೆಕ್‌ ತಂಗುದಾಣ, ನೂರಾರು ಪ್ರಯಾಣಿಕರು ನಿತ್ಯ ಕಾಯುವ ಕಡೆ ಕೇಳುವವರೇ ಇಲ್ಲ

ನಡೆದು ಬರುತ್ತಾರೆ ಪ್ರಯಾಣಿಕರು

ಸೊರಬ, ಶಿಕಾರಿಪುರದಿಂದ ರೈಲ್ವೆ ನಿಲ್ದಾಣಕ್ಕೆ ಬರುವವರು ಸದ್ಯ ಫ್ರೀಡಂ ಪಾರ್ಕ್‌ ಬಳಿ ಬಸ್‌ ಇಳಿದು ನಡೆದುಕೊಂಡೇ ಬರುತ್ತಾರೆ. ಸಾಗರ, ತೀರ್ಥಹಳ್ಳಿ ಸೇರಿದಂತೆ ವಿವಿಧೆಡೆಯಿಂದ ಬರುವವರು ಬಸ್‌ ನಿಲ್ದಾಣದಿಂದ ಆಟೋಗಳನ್ನು ಅಥವಾ ಖಾಸಗಿ ಬಸ್ಸಿನಲ್ಲಿ ಹರಸಾಹಸ ಮಾಡಿಕೊಂಡು ರೈಲ್ವೆ ನಿಲ್ದಾಣದವರೆಗೆ ಬರುವಂತಾಗಿದೆ. ಇದೆ ಕಾರಣಕ್ಕೆ ರೈಲ್ವೆ ಸಮಯಕ್ಕೆ ಹೊಂದಿಕೆ ಆಗುವ ಹಾಗೆ ಈ ಮಾರ್ಗದಲ್ಲಿ ಬಸ್‌ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಅನ್ನುವುದು ಪ್ರಯಾಣಿಕರ ಆಗ್ರಹ.

KSRTC-Bus-to-Shimoga-Airport-in-Sogane.webp

ಕೆಎಸ್‌ಆರ್‌ಟಿಸಿ ಬಸ್‌ ಹತ್ತದ ಜನ

ಈ ಕುರಿತು ಶಿವಮೊಗ್ಗ ಲೈವ್.ಕಾಂಗೆ ಪ್ರತಿಕ್ರಿಯೆ ನೀಡಿದೆ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಜಿಲ್ಲಾ ಅಧಿಕಾರಿ ವಿಜಯಕುಮಾರ್‌, ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಖಾಸಗಿ ಸಿಟಿ ಬಸ್ಸುಗಳ ವ್ಯವಸ್ಥೆ ಇದೆ. ಆದ್ದರಿಂದ ಜನರು ಇವುಗಳ ಮೇಲೆ ಅವಲಂಬಿತವಾಗಿದ್ದಾರೆ. ಈಗ ಆರು ತಿಂಗಳ ಹಿಂದೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ರೈಲ್ವೆ ನಿಲ್ದಾಣದಿಂದ ಬಸ್‌ ನಿಲ್ದಾಣದವರೆಗೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಿದ್ದೆವು. ಎರಡ್ಮೂರು ಜನರು ಮಾತ್ರ ಬಸ್ಸು ಹತ್ತುತ್ತಿದ್ದರು. ರೈಲ್ವೆ ನಿಲ್ದಾಣಕ್ಕೆ ಬರುವ ಬಹುತೇಕರು ಶಿವಮೊಗ್ಗ ನಗರದವರೆ ಅಗಿರುತ್ತಾರೆ. ಅವರು ರೈಲಿನಲ್ಲಿ ಬಂದು ತಮ್ಮ ಬಡಾವಣೆತ್ತ ತೆರಳುತ್ತಾರೆಯೇ ವಿನಃ ಬಸ್‌ ನಿಲ್ದಾಣಕ್ಕೆ ಬರುವುದಿಲ್ಲ. ಬೆಳಗ್ಗೆ ಜನ ಶತಾಬ್ದಿಗಾಗಿಯೂ ಬಸ್‌ ವ್ಯವಸ್ಥೆ ಮಾಡಿದ್ದೆವು. ಅದು ಉಪಯೋಗಕ್ಕೆ ಬರಲಿಲ್ಲ. ಮುಂದೆ ನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದ ವ್ಯವಸ್ಥೆ ಮಾಡಬೇಕಿದೆ. ಆಗ ರೈಲ್ವೆ ನಿಲ್ದಾಣಕ್ಕೂ ಬಸ್‌ ತೆರಳುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ – ‘ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಎಲ್ಲಿ?’

ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್ಸುಗಳು ಆರಂಭಿಸುವಂತೆ ಬೇಡಿಕೆ ಇದೆ. ಮಹಿಳೆಯರಿಗೆ ಶಕ್ತಿ ಯೋಜನೆಯ ಲಾಭ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪಾಸ್‌ ವ್ಯವಸ್ಥೆಯಾಗಲಿದೆ. ಇದೇ ಬಸ್ಸುಗಳು ರೈಲ್ವೆ ನಿಲ್ದಾಣದ ಕಡೆಗೆ ಸಂಚರಿಸಿದರೆ ರೈಲ್ವೆ ಪ್ರಯಾಣಿಕರು ನಗರದ ವಿವಿಧೆಡೆಗೆ ತೆರಳಲು ಅನುಕೂಲವಾಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2023

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

Leave a Comment