ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 SEPTEMBER 2023
SHIMOGA : ಹಿರಿಯ ನ್ಯಾಯವಾದಿ (Advocate), ಸಾಮಾಜಿಕ ಹೋರಾಟಗಾರ್ತಿ ಮಂಜುಳಾ ದೇವಿ (67) ಭಾನುವಾರ ನಿಧನರಾದರು. ಇವರು ಶಿವಮೊಗ್ಗ ನ್ಯಾಯಾಲಯದ (Court) ಮೊದಲ ಮಹಿಳಾ ನ್ಯಾಯಾವಾದಿ.
ತುಂಗಾ ಮೂಲ ಉಳಿಸಿ ಹೋರಾಟ
ತುಂಗಾ ಮೂಲ ಉಳಿಸಿ ಹೋರಾಟದಲ್ಲಿ ಮಂಜುಳಾ ದೇವಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವಿವಾಹಿತರಾಗಿದ್ದ ಮಂಜುಳಾದೇವಿ ಶಾಲಾ ಗೇಣಿ ಜಮೀನು ಹೋರಾಟ ಸೇರಿ ಹಲವು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಇದನ್ನೂ ಓದಿ – ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?
ಚಳವಳಿಗಳ ಜೊತೆಗೆ ವಕೀಲಿ ವೃತ್ತಿಯನ್ನು ಮುಂದುವರೆಸಿದ್ದರು. ಜಿಲ್ಲೆಯ ಹಲವು ಹೆಸರಾಂತ ವಕೀಲರು ಇವರ ಗರಡಿಯಲ್ಲಿ ಕಲಿತಿದ್ದಾರೆ. ರಾಜಕಾರಣದಲ್ಲು ತೊಡಗಿದ್ದ ಮಂಜುಳಾ ದೇವಿ ಅವರು ಶಿವಮೊಗ್ಗ ವಿಧಾನಸಭೆ ಚುನಾವಣೆಗು (Election) ಸ್ಪರ್ಧೆ ಮಾಡಿದ್ದರು. ಜನತಾ ಪಕ್ಷ, ಜನತಾದಳ, ಸಂಯುಕ್ತ ಜನತಾದಳ ಸಂಘಟನೆ ಮಾಡಿದ್ದರು ಎಂದು ವಕೀಲ ಕೆ.ಪಿ.ಶ್ರೀಪಾಲ್ ಸಾಮಾಜಿಕ ಜಾಲತಾಣದಲ್ಲಿ ಮಂಜುಳಾದೇವಿ ಅವರನ್ನು ಸ್ಮರಿಸಿದ್ದಾರೆ.
ಭಾನುವಾರ ಮಂಜುಳಾದೇವಿ ಅವರು ಕೊನೆಯುಸಿರೆಳೆದಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.
LATEST NEWS
- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

About The Editor
ನಿತಿನ್ ಆರ್.ಕೈದೊಟ್ಲು
















