SHIVAMOGGA LIVE NEWS | 13 SEPTEMBER 2023
SORABA : ಕುಬಟೂರು ಗ್ರಾಮದ ದೊಡ್ಡಕೆರೆಗೆ (Lift irrigation) ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತ ಬಾಗೀನ ಅರ್ಪಿಸಿದರು. ಈ ಸಂದರ್ಭ ಗ್ರಾಮಸ್ಥರು, ಕಾಂಗ್ರೆಸ್ ಕಾರ್ಯಕರ್ತರು, ಬಂಗಾರಪ್ಪ ಅವರ ಬೆಂಬಲಿಗರು ಸೇರಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
ಇದೆ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಂಗಾರಪ್ಪ ಅವರು ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಬವಣೆ ಅರಿತು ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ ಮಾಡಿದ್ದರು. ಇದರಿಂದ ಶೀಘ್ರವಾಗಿ ಯೋಜನೆ ಆರಂಭಿಸಲು ಸಹಕಾರಿಯಾಯಿತು. ನನ್ನ ಹೋರಾಟದಿಂದಾಗಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಯೋಜನೆಗೆ ಮಂಜೂರಾತಿ ನೀಡಿದ್ದರು. ಯಡಿಯೂರಪ್ಪ ಅವರು ತಮ್ಮ ಅವಧಿಯಲ್ಲಿ ಯೋಜನೆ ಜಾರಿಎ ಸಹಕಾರ ನೀಡಿದರು. ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಯೋಜನೆ ಪೂರ್ಣಗೊಂಡಿತು. ತಾಲೂಕಿನ ಜನರಿಗೆ ನೀರಾ ವರಿ ಸೌಲಭ್ಯ ಒದಗಿಸಲು ಪಕ್ಷಾತೀತವಾಗಿ ಸಹಕರಿಸಿದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದರು.
ಸಚಿವ ಮಧು ಬಂಗಾರಪ್ಪ ಪತ್ನಿ ಅನಿತಾ ಮಧು ಬಂಗಾರಪ್ಪ, ಪುತ್ರ ಸೂರ್ಯ ಜೊತೆಯಲ್ಲಿದ್ದರು.
ಇದನ್ನೂ ಓದಿ – ಗಣೇಶ ಹಬ್ಬ, ಈದ್ ಮಿಲಾದ್, ಶಿವಮೊಗ್ಗದಲ್ಲಿ ಮಿನಿಸ್ಟರ್ ನೇತೃತ್ವದಲ್ಲಿ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200