ಶಿವಮೊಗ್ಗದಲ್ಲಿ ಬಸ್‌ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 SEPTEMBER 2023

SHIMOGA : ಬಸ್‌ ಹತ್ತುವ ವೇಳೆ ಹಿರಿಯ ನಾಗರಿಕರೊಬ್ಬರ (Aged Person) ಬಳಿ ಇದ್ದ ನಗದು ಕಳ್ಳತನ ಮಾಡಲಾಗಿದೆ. ಮೊಮ್ಮಗನ ಶಾಲೆಯ ಫೀಸ್‌ ಕಟ್ಟಲು ತಂದಿದ್ದ ಹಣವನ್ನು ಕಳ್ಳತನ (PICK POCKET) ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕುಲಗಟ್ಟೆ ಗ್ರಾಮದ ಹನುಮಂತಪ್ಪ ಎಂಬುವವರು ಸೆ.16ರಂದು ಶಿವಮೊಗ್ಗಕ್ಕೆ ಆಗಮಿಸಿದ್ದರು. ಗೋಪಾಳದಲ್ಲಿರುವ ಖಾಸಗಿ ಶಾಲೆಯಲ್ಲಿ ಹನುಮಂತಪ್ಪ ಅವರ ಮೊಮ್ಮಗ ಓದುತ್ತಿದ್ದಾನೆ. ಆತನ ಶಾಲಾ ಶುಲ್ಕ ಪಾವತಿಸಲು 60 ಸಾವಿರ ರೂ. ಹಣ ತಂದಿದ್ದರು.

ಗಣೇಶ ಚತುರ್ಥಿ ಹಿನ್ನೆಲೆ ಶಾಲೆಗೆ ರಜೆ ಇರಲಿದೆ. ಮೊಮ್ಮಗನನ್ನು ಕರೆದೊಯ್ಯುವಂತೆ ಹನುಮಂತಪ್ಪ ಅವರಿಗೆ ತಿಳಿಸಿದ ಶಾಲೆಯ ಆಡಳಿತ ಮಂಡಳಿ, ಹಬ್ಬದ ನಂತರ ಶುಲ್ಕ ಪಾವತಿಸುವಂತೆ ತಿಳಿಸಿದರು. ಈ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದ ಹನುಮಂತಪ್ಪ, ತಮ್ಮೂರಿಗೆ ತೆರಳುವ ಬಸ್‌ ಹತ್ತಿದ್ದಾರೆ. ಈ ವೇಳೆ ಜೇಬಿನಿಂದ ಬೀಗ ಕಳೆಗೆ ಬಿದ್ದಿದೆ. ಅದನ್ನು ಎತ್ತಿಕೊಂಡು ಚೆಡ್ಡಿ ಜೇಬು ಪರಿಶೀಲಿಸಿದಾಗ 60 ಸಾವಿರ ರೂ. ಹಣ ಕಳ್ಳತನವಾಗಿರುವುದು (PICK POCKET) ಗೊತ್ತಾಗಿದೆ.

ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸೈಲೆನ್ಸರ್‌ಗಳನ್ನು ಸಾಲಾಗಿರಿಸಿ ರೋಡ್‌ ರೋಲರ್‌ ಹತ್ತಿಸಿದ ಪೊಲೀಸರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment