ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 SEPTEMBER 2023
SAGARA : ಪಟ್ಟಣದ ಬಡಾವಣೆಯೊಂದರಲ್ಲಿ (Layout) ಅಪರೂಪದ ತಳಿಯ ಕಾಡುಪಾಪ ಕಾಣಿಸಿಕೊಂಡಿದೆ. ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಅದನ್ನು ಕಾಡಿಗೆ ಬಿಡಲಾಯಿತು.
ಸಾಗರ – ಸಿಗಂದೂರು (Sigandur) ರಸ್ತೆಯ ಲೇ ಔಟ್ನ ಬೇಲಿಯ ನಡುವೆ ಈ ಕಾಡುಪಾಪ ಕಾಣಿಸಿಕೊಂಡಿದೆ. ಇಂಗ್ಲಿಷ್ನಲ್ಲಿ ಇದನ್ನು ಸ್ಲೆಂಡರ್ ಲೋರಿಸ್ ಎಂದು ಕರೆಯಲಾಗುತ್ತದೆ. ನಿಧಾನವಾಗಿ ಸಾಗುವ, ಓಡಲು, ಹಾರಲು ಬಾರದ ಸೌಮ್ಯ ಸ್ವಭಾವದ ಪ್ರಾಣಿ ಎಂದು ಗುರುತಿಸಲಾಗಿದೆ.
‘ದಟ್ಟ ಕಾಡಿನಲ್ಲಿ ಕಾಣಿಸುವ ಕಾಡುಪಾಪ ಪಟ್ಟಣದ ಸಮೀಪ ಬಂದಿರುವುದು ಆಶ್ಚರ್ಯ. ಹಗಲು ವೇಳೆ ಇದಕ್ಕೆ ಕಣ್ಣು ಕಾಣಿಸುವುದಿಲ್ಲ. ರಾತ್ರಿ ವೇಳೆ ಮಿಡತೆ, ಚಿಟ್ಟೆಗಳನ್ನು ತಿಂದು ಇವು ಬದುಕುತ್ತವೆ’ ಎಂದು ಅಖಿಲೇಶ್ ಚಿಪ್ಪಳಿ ತಿಳಿಸಿದರು.
ಇದನ್ನೂ ಓದಿ – ಬಸ್ ಹತ್ತಿ ಸೀಟ್ನಲ್ಲಿ ಕುಳಿತು ಬ್ಯಾಗ್ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು
LATEST NEWS
- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

- ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು
















