ಶಿವಮೊಗ್ಗದಲ್ಲಿ ಚುನಾವಣಾ ಕಚೇರಿ ಶುರು ಮಾಡಿದ ಆಯನೂರು ಮಂಜುನಾಥ್‌, ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 SEPTEMBER 2023

SHIMOGA : ಮಾಜಿ ಸಂಸದ ಆಯನೂರು ಮಂಜುನಾಥ್‌ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯಾಲಯ (Election Office) ಆರಂಭಿಸಿದ್ದಾರೆ. ಅಲ್ಲದೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಮಿಷನ್‌ ಕಾಂಪೌಂಡ್‌ನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯಾಲಯ ಆರಂಭಿಸಲಾಗಿದೆ.

ಇದೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆಯನೂರು ಮಂಜುನಾಥ್‌, ಚುನಾವಣೆಗೆ ಸ್ಪರ್ಧಿಸಲು ನಾಲ್ಕೈದು ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಅವಕಾಶ ನೀಡಲಿದೆ ಎಂಬುದನ್ನು ಕಾದು ನೋಡಬೇಕು. ನನಗೆ ಅವಕಾಶ ಸಿಗಲಿದೆ ಎಂಬ ವಿಶ್ವಾಸ ಇದೆ. ನೈರುತ್ಯ ಪದವೀಧರರ ಕ್ಷೇತ್ರ ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಕೊಡುಗು, ದಾವಣಗೆರೆಯ ಹೊನ್ನಾಳ್ಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕು ಒಳ ಗೊಂಡಿದೆ. ಸೆ.30ರಿಂದ ಚುನಾವಣಾ ನೋಂದಣಿ ಕಾರ್ಯ ನಡೆಯಲಿದೆ. ರಾಜ್ಯದ ಎಲ್ಲಾ ನೌಕರರು, ಶಿಕ್ಷಕರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಪರ ಹೋರಾಟ ಮಾಡಲು ವಿಧಾನಪರಿಷತ್ ಚುನಾವಣೆ ನೆರವಾಗಲಿದೆ ಎಂದರು.

ಇದನ್ನೂ ಓದಿ – ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ದಿನಾಂಕ ಫಿಕ್ಸ್‌, ದೊಡ್ಡ ಪಟ್ಟಿ ರಿಲೀಸ್‌, ಏನಿದೆ ಅದರಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment