ಕುಂದಾಪುರಕ್ಕೆ ಹೋಗಲು ಶಿವಮೊಗ್ಗದಲ್ಲಿ ಪತಿ ಜೊತೆ ಬಸ್‌ ಹತ್ತಿದ ಮಹಿಳೆ, ಸೀಟ್‌ ಸಿಕ್ಕ ತಕ್ಷಣ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 SEPTEMBER 2023

SHIMOGA : ಕುಂದಾಪುರಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತುವ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ (Vanity Bag) ಚಿನ್ನಾಭರಣ ಇದ್ದ ಪರ್ಸ್‌ ಕಳ್ಳತನವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಇಂತಹ ಪ್ರಕರಣಗಳು ಹೆಚ್ಚಾಗಿವೆ.

ಕುಂದಾಪುರದ ರತ್ನಾ ಆರ್‌.ಭಟ್‌ ಎಂಬುವವರು ಬೆಂಗಳೂರಿನಲ್ಲಿ ಮದುವೆ ಸಮಾರಂಭಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಯನಗರದಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದಿದ್ದು ಸೆ.23ರಂದು ಕುಂದಾಪುರಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳಿದ್ದರು. ಪತಿಯೊಂದಿಗೆ ಬಸ್‌ ಹತ್ತಿ ಕುಳಿತಾಗ ವ್ಯಾನಿಟಿ ಬ್ಯಾಗ್‌ ಜಿಪ್‌ ತೆಗೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ವ್ಯಾನಿಟಿ ಬ್ಯಾಗಿನೊಳಗಿದ್ದ ಪರ್ಸ್‌ ಕಳ್ಳತನವಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ KSRTC ಬಸ್‌ ನಿಲ್ದಾಣಕ್ಕೆ ಕಂಟಕವಾಯ್ತು 3ನೇ ಗೇಟ್‌, ಎಚ್ಚೆತ್ತುಕೊಳ್ಳದಿದ್ದರೆ ಅಪಘಾತ ಫಿಕ್ಸ್‌

ರತ್ನಾ ಆರ್‌.ಭಟ್‌ ಅವರ ಪರ್ಸ್‌ನಲ್ಲಿ 74 ಗ್ರಾಂ ತೂಕ 2.59 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣ ಇದ್ದವು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment