ಹೊಳೆಹೊನ್ನೂರು ಸಮೀಪ ಭೀಕರ ಅಪಘಾತ, ಮೂವರು ಯುವಕರ ದೇಹ ಛಿದ್ರ ಛಿದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 OCTOBER 2023

HOLEHONNURU : ಲಾರಿ ಮತ್ತು ಎರಡು ಬೈಕುಗಳ (BIKES) ನಡುವೆ ಡಿಕ್ಕಿ ಸಂಭವಿಸಿದ್ದು ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದಾರೆ. ಲಾರಿ ಚಕ್ರ ಅಡಿಗೆ ಸಿಲುಕಿದ್ದ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ.

ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್‌ – ಅರಹತೊಳಲು ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಗುರುತು ಪತ್ತೆಯಾಗಿಲ್ಲ. ಮತ್ತೊಂದು ಬೈಕಿನಲ್ಲಿದ್ದ ಭದ್ರಾವತಿ ತಾಲೂಕು ಅರದೊಟ್ಲು ಗ್ರಾಮದ ಗಗನ್‌ಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?

ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment