ರಾಗಿಗುಡ್ಡ ಈಗ ಖಾಕಿ ಕೋಟೆ, ಏರಿಯಾದ ಒಳ, ಹೊರ ಹೋಗಲು ಬೇಕು ಪರ್ಮಿಷನ್‌, ಹೇಗಿದೆ ಸದ್ಯದ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 OCTOBER 2023

SHIMOGA : ಕಲ್ಲು ತೂರಾಟ (Stone Pelting) ಪ್ರಕರಣದ ಬಳಿಕ ರಾಗಿಗುಡ್ಡ ಖಾಕಿ ಭದ್ರ ಕೋಟೆಯಾಗಿದೆ. ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಜನ ಗುಂಪುಗೂಡದಂತೆ ಎಚ್ಚರ ವಹಿಸಲಾಗಿದೆ. ಬಡಾವಣೆಯ ಒಳ ಮತ್ತು ಹೊರ ಹೋಗಲು ಸ್ಪಷ್ಟ ಕಾರಣ ತಿಳಿಸಬೇಕಾಗಿದೆ.

ಶನಿವಾರ ಸಂಜೆ ಈದ್‌ ಮಿಲಾದ್‌ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ (Stone Pelting) ನಡೆಸಿದ್ದರು. ಈ ಘಟನೆ ಬೆನ್ನಿಗೆ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನೊಂದೆಡೆ ಜನ ಗುಂಪುಗೂಡದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

ಒಳ, ಹೊರ ಹೋಗಲು ಬೇಕು ಅನುಮತಿ

ರಾಗಿಗುಡ್ಡ ಬಡಾವಣೆಯ ಒಳ ಮತ್ತು ಹೊರ ಹೋಗಲು ಪೊಲೀಸರ ಅನುಮತಿ ಕಡ್ಡಾಯ. ಸ್ಪಷ್ಟ ಕಾರಣವಿದ್ದರಷ್ಟೆ ರಾಗಿಗುಡ್ಡ ಬಡಾವಣೆ ಪ್ರವೇಶಕ್ಕೆ ಪೊಲೀಸರು ಅನುಮತಿಸುತ್ತಿದ್ದಾರೆ. ಇಲ್ಲವಾದಲ್ಲಿ ಹಿಂತಿರುಗಿ ಹೋಗುವಂತೆ ಸೂಚಿಸುತ್ತಿದ್ದಾರೆ. ಇನ್ನು, ಬಡಾವಣೆಯ ಒಳಗು ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಿನಾಕಾರಣ ಮನೆಯಿಂದ ಹೊರಬಾರದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಹಾಗಾಗಿ ಮನೆಯಿಂದ ಹೊರಗೆ ಓಡಾಡುವವರಿಗೆ ಆಗಾಗ ಎಚ್ಚರಿಕೆ ಕೊಟ್ಟು ಒಳಗೆ ಕಳುಹಿಸುತ್ತಿದ್ದಾರೆ.

ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರೀ ಪ್ಲಾನ್‌ ಘಟನೆ, KA 35, KA 19, UP ನೋಂದಣಿ ವಾಹನಗಳು ಎಲ್ಲಿ?

ರಾಗಿಗುಡ್ಡದಲ್ಲಿ ಎಲ್ಲವು ಸ್ಥಬ್ಧ

ನಿಷೇಧಾಜ್ಞೆ ಹಿನ್ನೆಲೆ ರಾಗಿಗುಡ್ಡ ಸಂಪೂರ್ಣ ಸ್ಥಬ್ಧವಾಗಿದೆ. ಮುಖ್ಯ ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಅಂಗಡಿ, ಮುಂಗಟ್ಟು ಬಂದ್‌ ಆಗಿದೆ. ಕ್ಲಿನಿಕ್‌ ಮತ್ತು ಮೆಡಿಕಲ್‌ ಶಾಪ್‌ ಹೊರತು ಉಳಿದೆಲ್ಲ ಮಳಿಗೆಗಳ ಬಾಗಿಲು ಹಾಕಲಾಗಿದೆ.

ರಾಗಿಗುಡ್ಡ ಹೇಗಿದೆ ಈಗ? ಇಲ್ಲಿದೆ ಫೋಟೊ ಆಲ್ಬಂ

2

1

5

6

7

8

9

10

4

3

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment