ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 OCTOBER 2023
SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹೊತ್ತಿಗೆ ಸ್ಥಳಕ್ಕೆ ಆಗಮಿಸಿದ್ದ ಎರಡು ಓಮ್ನಿ ಕಾರುಗಳ (Omni car) ಕುರಿತು ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಕೂಡಲೆ ಓಮ್ನಿ ಕಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಯುವಕರ ವಿಚಾರಣೆ ನಡೆಸಿದ್ದಾರೆ.
ಓಮ್ನಿ ಕಾರಿನಲ್ಲಿದ್ದವರು ದಾವಣಗೆರೆ ಜಿಲ್ಲೆಯ ನ್ಯಾಮತಿ ಮೂಲಕದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ತಮ್ಮ ಊರಿಗೆ ತೆರಳುವ ಮಾರ್ಗ ಮಧ್ಯೆ ಮೆರವಣಿಗೆ ನೋಡಲು ರಾಗಿಗುಡ್ಡಕ್ಕೆ ಬಂದಿದ್ದರು ಎಂದು ವಿಚಾರಣೆ ವೇಳೆ ಗೊತ್ತಾಗಿದೆ.
ಇದನ್ನೂ ಓದಿ- ರಾಗಿಗುಡ್ಡ ಘಟನೆ ಬಗ್ಗೆ ವಾಟ್ಸಪ್ನಲ್ಲಿ ಫೋಟೊ, ವಿಡಿಯೋ ಷೇರ್ ಮಾಡುವಾಗ ಹುಷಾರ್, ಒಬ್ಬನ ವಿರುದ್ಧ ದಾಖಲಾಯ್ತು ಕೇಸ್
ಒಂದು ಓಮ್ನಿ ಕಾರಿನಲ್ಲಿ (Omni car) ಒಂದೇ ಸಮುದಾಯದ ಯುವಕರು ಇದ್ದರು. ಮತ್ತೊಂದು ಕಾರಿನಲ್ಲಿ ಎರಡು ಸಮುದಾಯದ ಯುವಕರು ಇದ್ದರು. ಈ ಪೈಕಿ ಕೆಲವರು ವಿದ್ಯಾರ್ಥಿಗಳು. ಕಾರಿನಲ್ಲಿದ್ದವರಿಗೆ ಯಾವುದೆ ಅಪರಾಧ ಹಿನ್ನೆಲೆ ಇಲ್ಲ. ನ್ಯಾಮತಿ ಠಾಣೆ ಪೊಲೀಸರು ಕೂಡ ಯುವಕರ ವಿಚಾರಣೆ ನಡೆಸಿದ್ದಾರೆ. ಇವರಿಗು ಪ್ರಕರಣಕ್ಕು ಯಾವುದೆ ಸಂಬಂಧವಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





