ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 OCTOBER 2023
THIRTHAHALLI : ಮನೆಯಲ್ಲಿ ಬೆಂಕಿಗೆ ಒಂದೇ ಕುಟುಂಬದ ಮೂವರು (Three persons) ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ಘಟನೆ ಸಂಭವಿಸಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಾವನ್ನಪ್ಪಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ – ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು
ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೆಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.



LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





