ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 OCTOBER 2023
THIRTHAHALLI : ಬೆಂಕಿ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಅರಳಸುರಳಿಯ ಭರತ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Hospital) ದಾಖಲು ಮಾಡಲಾಗಿದೆ. ಭಾನುವಾರ ಸಂಜೆ ಭರತ್ನನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ರವಾನಿಸಲಾಗಿದೆ.
ಭರತ್ ಅವರ ಮುಖ ಊದಿಕೊಂಡಿದೆ. ಎದೆ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ – ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್ಎ ದೌಡು, ಘಟನೆ ಕುರಿತು ಹೇಳಿದ್ದೇನು?
ಅರಳಸುರಳಿಯಲ್ಲಿ ಇಡೀ ಕುಟುಂಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿತ್ತು ಎನ್ನಲಾಗಿದೆ. ಅಗ್ನಿ ದುರಂತದಲ್ಲಿ ರಾಘವೇಂದ್ರ ಕೇಕುಡ, ಪತ್ನಿ ನಾಗರತ್ನಮ್ಮ, ಪುತ್ರಿ ಶ್ರೀರಾಮ್ ಸಾವನ್ನಪ್ಪಿದ್ದರು. ಕಿರಿಯ ಪುತ್ರ ಭರತ್ ತೀವ್ರ ಸುಟ್ಟ ಗಾಯಗಳೊಂದಿಗೆ ಮನೆಯಿಂದ ಹೊರಬಂದಿದ್ದ. ಆತನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಅಗ್ನಿ ದುರಂತದಲ್ಲಿ ಮೃತರಾದ ರಾಘವೇಂದ್ರ ಕೇಕುಡ, ನಾಗರತ್ನಮ್ಮ, ಶ್ರೀರಾಮ್ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆಯಿತು. ಹಿರಿಯ ಸಹೋದರ ಮುಂದೆ ನಿಂತು ಅಂತಿಮ ವಿಧಿ ವಿಧಾನ ನೆರವೇರಿಸಿದರು. ಸಂಬಂಧಿಕರು, ಸ್ನೇಹಿತರು ದೊಡ್ಡ ಸಂಖ್ಯೆಯಲ್ಲ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















