ಚಂದ್ರಗುತ್ತಿ ದೇಗುಲದಲ್ಲಿ ಖಾಸಗಿಯವರಿಂದ ದಸರಾ, ಸಮಿತಿ ವಿರೋಧ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SORABA : ಶ್ರೀಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದಸರಾ ಉತ್ಸವ (Dasara Utsava) ಆಚರಿಸಲು ಖಾಸಗಿ ಸಮಿತಿಯವರಿಗೆ ಅವಕಾಶ ಒದಗಿಸಬಾರದು ಎಂದು ಆಗ್ರಹಿಸಿ ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ತಹಸೀಲ್ದಾರ್‌‌ ಹುಸೇನ್ ಸರಕಾವಸ್ ಅವರಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ದಸರಾ ಉತ್ಸವ ಅಚರಣೆ ಕುರಿತು ಉಪವಿಭಾಗಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಗ್ರಾಮ ಪಂಚಾಯಿತಿ, ಗ್ರಾಮಸ್ಥರು ಮತ್ತು ದೇವಸ್ಥಾನ ಸಮಿತಿಯವರು ಒಗ್ಗೂಡಿ ಶಾಂತಿಯುತವಾಗಿ ಹಬ್ಬ ಆಚರಿಸಲು ತಿಳಿಸಲಾಗಿದೆ. ಆದರೆ, ದೇವಸ್ಥಾನದ ಕಲ್ಯಾಣ ಮಂದಿರ ಆವರಣದಲ್ಲಿ ಖಾಸಗಿಯಾಗಿ ಶ್ರೀ ರೇಣುಕಾಂಬ ದಸರಾ ಆಚರಣಾ ಸಮಿತಿಯವರು ವೇದಿಕೆ ನಿರ್ಮಿಸುತ್ತಿರುವುದಕ್ಕೆ ಗ್ರಾಮಸ್ಥರ ವಿರೋಧವಿದೆ.ಪ್ರಸನ್ನ ಶೇಟ್, ಸಮಿತಿ ಅಧ್ಯಕ್ಷ

ದಸರಾ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಖಾಸಗಿಯವರಿಗೆ ಅವಕಾಶ ನೀಡಿದರೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ದೇವಸ್ಥಾನ ಸಮಿತಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ತಿಳಿಸಿದಂತೆ ಖಾಸಗಿಯವರಿಗೆ ಅವಕಾಶ ಒದಗಿಸಬಾರದು. ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾದರೆ ಅಧಿಕಾರಿಗಳೆ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ದೇವಸ್ಥಾನ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ, ಶಿವಶಂಕರಗೌಡ, ಪ್ರವೀಣ್ ಮಿರ್ಜಿ ಇತರರಿದ್ದರು.

ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment