SHIVAMOGGA LIVE NEWS | 10 OCTOBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SORABA : ಶ್ರೀಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದಸರಾ ಉತ್ಸವ (Dasara Utsava) ಆಚರಿಸಲು ಖಾಸಗಿ ಸಮಿತಿಯವರಿಗೆ ಅವಕಾಶ ಒದಗಿಸಬಾರದು ಎಂದು ಆಗ್ರಹಿಸಿ ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ತಹಸೀಲ್ದಾರ್ ಹುಸೇನ್ ಸರಕಾವಸ್ ಅವರಿಗೆ ಮನವಿ ಸಲ್ಲಿಸಲಾಯಿತು.
ದಸರಾ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಖಾಸಗಿಯವರಿಗೆ ಅವಕಾಶ ನೀಡಿದರೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ದೇವಸ್ಥಾನ ಸಮಿತಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ತಿಳಿಸಿದಂತೆ ಖಾಸಗಿಯವರಿಗೆ ಅವಕಾಶ ಒದಗಿಸಬಾರದು. ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾದರೆ ಅಧಿಕಾರಿಗಳೆ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇವಸ್ಥಾನ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ, ಶಿವಶಂಕರಗೌಡ, ಪ್ರವೀಣ್ ಮಿರ್ಜಿ ಇತರರಿದ್ದರು.
ಇದನ್ನೂ ಓದಿ – ಚಂದ್ರಗುತ್ತಿ ರೇಣುಕಾಂಬ ದೇಗುಲದಲ್ಲಿ ನೂಲು ಹುಣ್ಣಿಮೆ, ಲಕ್ಷ ಲಕ್ಷ ಭಕ್ತರು ಭಾಗಿ, ಹೇಗಿತ್ತು ಪೂಜಾ ವೈಭವ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






