SHIVAMOGGA LIVE NEWS | 11 OCTOBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಅಯೋಜಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಆಸಕ್ತ ತಂಡಗಳು ಅ.15ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಲು ಜಾನಪದ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9449552795 ಸಂಪರ್ಕಿಸಬಹುದು.
ಇದನ್ನೂ ಓದಿ- ಗುಡ್ ನ್ಯೂಸ್, ವಂದೇ ಭಾರತ್ ರೀತಿಯ ಮತ್ತೊಂದು ರೈಲು ರೆಡಿ, ಟಿಕೆಟ್ ದರ ಕಡಿಮೆ, ಹೇಗಿದೆ ಹೊಸ ರೈಲು?
ದಸರಾದಲ್ಲಿ ಕವಿಗೋಷ್ಟಿ
ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ಪ್ರತಿ ವರ್ಷದಂತೆ ದಸರಾ ಕವಿಗೋಷ್ಠಿ ಏರ್ಪಡಿಸಲಾಗುವುದು ಎಂದು ಅಧ್ಯಕ್ಷರಾದ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತಿಯಿರುವವರು ತಮ್ಮ ಕವನದ ಜೊತೆ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ. ಆಯ್ದ ಕವನಗಳಿಗೆ ದಸರಾ ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಅವಕಾಶವಿರಲಿದೆ. ಹೆಚ್ಚಿನ ಮಾಹಿತಿಗಾಗಿ ಡಿ. ಮಂಜುನಾಥ, ದೂರವಾಣಿ ಸಂಖ್ಯೆ : 9449552795 ಸಂಪರ್ಕ ಮಾಡಲು ತಿಳಿಸಲಾಗಿದೆ.
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

About The Editor
ನಿತಿನ್ ಆರ್.ಕೈದೊಟ್ಲು






