ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 OCTOBER 2023
BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ.
ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್ ಅವರಿಗೆ ದಂಡ (Fine) ವಿಧಿಸಲಾಗಿದೆ.
ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್, ಇನ್ಮುಂದೆ ನಿಮ್ಮದೆ ಚಾನಲ್ ಮಾಡಬಹುದು
ಏನಿದು ಪ್ರಕರಣ?
ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು 2016ರ ಜನವರಿಯಿಂದ 2021ರ ಮೇ ತಿಂಗಳವರೆಗೆ ನೀಡಿರುವ ವೇತನದ ಮಾಹಿತಿ ಕೇಳಿದ್ದರು. ಪ್ರತಿ ತಿಂಗಳ ವಿವರದ ದೃಢೀಕೃತ ಪ್ರತಿ ನೀಡಬೇಕು ಎಂದು ಕಾರ್ಖಾನೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀನಿವಾಸ್ ಅವರಿಗೆ ಅರ್ಜಿ ಸಲ್ಲಿಸಿದ್ದರು.
ಶ್ರೀನಿವಾಸ್ ಅವರು ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಲು ವಿಫಲರಾಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಆಯೋಗ, ಮಾಹಿತಿ ಹಕ್ಕು ಅಧಿನಿಯಮದ ವಿವಿಧ ಕಲಂಗಳ ಅನ್ವಯ ದಂಡ ವಿಧಿಸಿದೆ. ಈ ಕುರಿತು ರಾಜ್ಯ ಮಾಹಿತಿ ಆಯುಕ್ತ ಹೆಚ್.ಸಿ ಸತ್ಯನ್ ಅವರು ಮೇಲ್ಮನವಿದಾರ ಟಿ.ಜಿ ಬಸವರಾಜಯ್ಯ ಅವರಿಗೆ ಈ ಮಾಹಿತಿ ನೀಡಿದ್ದಾರೆ.
LATEST NEWS
- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















