ಸಕ್ರೆಬೈಲು ಆನೆ ಬಿಡಾರ, ಮಾವುತ, ಕಾವಾಡಿಗಳ ಜೊತೆ ವೈಲ್ಡ್‌ ಟಸ್ಕರ್‌ ದಸರಾ ಸಂಭ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 OCTOBER 2023

SHIMOGA : ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿರುವ (Elephant Camp) ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆ ವಿತರಿಸಲಾಯಿತು.

ಆನೆಗಳ ತರಬೇತಿ ಕ್ಯಾಂಪ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಂಆರ್‌ಆರ್‌ಎಸ್ ಸಂಸ್ಥೆಯ ಅಂಗಸಂಸ್ಥೆ ಸಕ್ರೆಬೈಲು ವೈಲ್ಡ್ ಟಸ್ಕರ್ ಗೌರವಾಧ್ಯಕ್ಷ  ಎಂ .ಶ್ರೀಕಾಂತ್, ಆನೆ ಬಿಡಾರದ 80 ಮಾವುತರು, ಕಾವಾಡಿಗಳು ಮತ್ತು ಗಾಜನೂರು ವನ್ಯಜೀವಿ ವಿಭಾಗದ ಡಿಸಿಪಿ ವಾಚರ್ಸ್ ಮತ್ತು ನಿವೃತ್ತ ಜಮೇದಾರ್ ಗಳಿಗೆ ಬಟ್ಟೆ ವಿತರಿಸಿದರು.

ವೈಲ್ಡ‌್ ಟಸ್ಕರ್ ಸಂಸ್ಥೆ ಕೊರೊನಾ ಸಂದರ್ಭದಲ್ಲಿ ಜನ್ಮತಾಳಿದೆ. ಆಗ ಮಾವುತ ಹಾಗೂ ಕಾವಾಡಿಗಳಿಗೆ ಉಚಿತ ಆಹಾರದ ಕಿಟ್‌ಗಳನ್ನ ವಿತರಣೆ ಮಾಡಲಾಗಿತ್ತು. ಮಾವುತ, ಕಾವಾಡಿಗಳು ದಿನದ 18 ಗಂಟೆ ನಿರಂತರ ಕೆಲಸ ಮಾಡುತ್ತಾರೆ. ಆನೆಗಳಿಗಾಗಿ ಇವರು ಜೀವನವನ್ನೆ ಮುಡಿಪಾಗಿಟ್ಟಿದ್ದಾರೆ. ಇವರ ಸಮಸ್ಯೆಗಳಿಗೆ ಸಂಸ್ಥೆ ಯಾವಾಗಲು ಧ್ವನಿಯಾಗಿರಲಿದೆ. ಎಂ.ಶ್ರೀಕಾಂತ್‌, ಗೌರವಾಧ್ಯಕ್ಷರು, ವೈಲ್ಡ್‌ ಟಸ್ಕರ್‌ ಸಂಸ್ಥೆ

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಜೇಸುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಉಪಸ್ಥಿತರಿದ್ದರು. ಪತ್ರಕರ್ತ ನಾಗರಾಜ್ ನೇರಿಗೆ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್, ಡಿಆರ್‌ಎಫ್‌ಒ ಮಲ್ಲಿಕಾರ್ಜುನ್ ಸೇರಿದಂತೆ ಬಿಡಾರದ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ- ದಸರಾ ರಜೆ, ಪ್ರಯಾಣಿಕರ ಅನುಕೂಲಕ್ಕಾಗಿ KSRTCಯಿಂದ ವಿಶೇಷ ವ್ಯವಸ್ಥೆ

wild%20tusker

wild%20tusker1

wild%20tusker2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2023

Leave a Comment