ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
SHIMOGA : ಮುಂಗಡ ಬುಕ್ಕಿಂಗ್ ಮಾಡಿದರೂ ನಿಗದಿತ ಸಮಯಕ್ಕೆ ಕಾರು ಡೆಲೆವರಿ ನೀಡದೆ, ಬುಕ್ಕಿಂಗ್ ಹಣ ಮರಳಿಸದೆ ಸತಾಯಿಸಿದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪರಿಹಾರ ನೀಡುವಂತೆ ಕಾರ್ ಶೋ ರೂಂ (Car Showroom) ಒಂದಕ್ಕೆ ಆದೇಶಿಸಿದೆ.
ಬುಕ್ಕಿಂಗ್ ಮಾಡಿದ್ದರು ಕಾರು ಕೊಡಲಿಲ್ಲ
ನಗರದ ವೈ.ಎಲ್.ರವಿಕುಮಾರ್ ಎಂಬುವರು ಶಿವಮೊಗ್ಗದ ಪ್ರತಿಷ್ಠಿತ ಕಾರು ಶೋರೂಮ್ನಲ್ಲಿ ಸ್ಕಾರ್ಪಿಯೋ ಎನ್ಝಡ್ 6 ಡೀಸೆಲ್ ಎಂಟಿ ಬಿಳಿ ಬಣ್ಣದ ಕಾರು ಖರೀದಿಗೆ 21 ಸಾವಿರ ರೂ. ಪಾವತಿಸಿದ್ದರು. 2023ರ ಆಗಸ್ಟ್ 6ರಂದು ಬುಕ್ಕಿಂಗ್ ಮಾಡಿದ್ದರು. ಆದರೆ ಉತ್ಪಾದನಾ ಘಟಕದಲ್ಲಿ ತೊಂದರೆ ಉಂಟಾಗಿದೆ ಎಂದು ಕಾರಣ ನೀಡಿ ಸಂಸ್ಥೆ ಕಾರು ನೀಡಿರಲಿಲ್ಲ. ಮುಂಗಡ ಹಣವನ್ನೂ ಮರಳಿಸಿರಲಿಲ್ಲ.
ಆಯೋಗದ ಮುಂದೆ ಪರಿಹಾರಕ್ಕೆ ಮನವಿ
ಈ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸೂಕ್ತ ಪರಿಹಾರ ಕೋರಿ ರವಿಕುಮಾರ್ ಅವರು ಪ್ರಕರಣ ದಾಖಲಿಸಿದ್ದರು. ಆಯೋಗದಿಂದ ಜಾರಿಗೊಳಿಸಿದ ನೋಟಿಸ್ಗೆ ಎದುರುದಾರರು ಕಲಾಪಕ್ಕೆ ಹಾಜರಾಗಿರದ ಕಾರಣ ಏಕಪಕ್ಷೀಯವಾಗಿ ಆದೇಶಿಸಲಾಗಿದೆ. ಪ್ರಕರಣದ ಅಂಶಗಳು ಮತ್ತು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಗಣಿಸಿ, ಪರಿಶೀಲಿಸಿದಾಗ ಎದುರುದಾರರ ಸೇವಾ ನೂನ್ಯತೆ ಕಂಡುಬಂದಿದ್ದು ಪ್ರಸ್ತುತ ಪ್ರಕರಣವನ್ನು ಭಾಗಶಃ ಪುರಸ್ಕರಿಸಲಾಗಿದೆ.
ದಂಡ ವಿಧಿಸಿದ ಆಯೋಗ
ಎದುರುದಾರರು ದೂರುದಾರರಿಂದ ಪಡೆದ ಮುಂಗಡ ಹಣ 21 ಸಾವಿರ ರೂ.ಗಳನ್ನು ಶೇ.9 ಬಡ್ಡಿ ಸಮೇತ ಪಾವತಿಸಬೇಕು. ಮಾನಸಿಕ ಹಿಂಸೆ ಹಾಗೂ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಹಾರವಾಗಿ 10 ಸಾವಿರ ರೂ., ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು 10 ಸಾವಿರ ರೂ. ಪಾವತಿಸಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ. ಪಟ್ಟಣಶೆಟ್ಟಿ ಮತ್ತು ಬಿ.ಡಿ.ಯೋಗಾನಂದ ಅವರು ಪೀಠವು ಆದೇಶಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















