ಶಿವಮೊಗ್ಗದಲ್ಲಿ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಇಲ್ಲಿದೆ ಸಂವಾದದಲ್ಲಿ ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2023

SHIMOGA : ಜಿಲ್ಲೆಯಲ್ಲಿ ಕೈಗಾರಿಕೆಗಳ (Industries) ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲು ಸಿದ್ಧ. ಅಲ್ಲದೆ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಉದ್ದಿಮೆದಾರರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಂವಾದ ನಡೆಸಿದರು.

ಮಿನಿಸ್ಟರ್‌ ತಿಳಿಸಿದ 3 ಪ್ರಮುಖಾಂಶ

POINT-1-jpg.webpಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಕೊರತೆ ಅಥವಾ ಇನ್ನಾವುದೋ ಕಾರಣಕ್ಕೆ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಕೈಗಾರಿಕೆಗಳು ಬೆಳೆಯಲು ಅಗತ್ಯವಾದ ಮೂಲ ಸೌಕರ್ಯ, ರಸ್ತೆ, ವಿಮಾನ ನಿಲ್ದಾಣ ಸೇರಿದಂತೆ ಎಲ್ಲ ಸೌಲಭ್ಯವಿದೆ. ಇದರ ಬಳಕೆ ಆಗಬೇಕು.

POINT-2-jpg.webpಕೈಗಾರಿಕೆ ಬೆಳೆದಷ್ಟು ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ದಿ ಆಗಲಿದೆ. ಉದ್ದಿಮೆದಾರರು, ಕೈಗಾರಿಕೋದ್ಯಮಿಗಳು ಸಲಹೆ ನೀಡಿದಲ್ಲಿ ಅನುಕೂಲ. ಸದ್ಯ ಈಗ ವಿದ್ಯುತ್ ಸಮಸ್ಯೆ ಇದೆ. ರೈತರಿಗೆ ವಿದ್ಯುತ್ ಕೊಡಬೇಕು. ಇಲ್ಲವಾದಲ್ಲಿ ರೈತರ ಫ್ಯಾಕ್ಟರಿ ನಿಂತು ಉತ್ಪಾದನೆ ಕಡಿಮೆ ಆಗುತ್ತದೆ. ಆರ್ಥಿಕವಾಗಿ ಹಿಂದುಳಿಯುತ್ತೇವೆ.

POINT-3-jpg.webpಉತ್ತಮ ಶಾಲೆಗಳಿವೆ ಎಂದು ಜನ ಬೆಂಗಳೂರಿಗೆ ಹೋಗುತ್ತಾರೆ. ಇಲ್ಲಿಯೇ ಉತ್ತಮ ಶಿಕ್ಷಣ ಸಂಸ್ಥೆಗಳಾದರೆ ಜನ ಬೆಂಗಳೂರಿಗೆ ಹೋಗುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗಿದ್ದೇನೆ. ಅದೇ ರೀತಿಯಲ್ಲಿ ಕೈಗಾರಿಕೆಯನ್ನೂ ಬೆಳೆಸೋಣ.

 ಟೌನ್‍ಶಿಪ್ ಅಭಿವೃದ್ದಿಗೆ ಕನಿಷ್ಟ 1250 ಎಕರೆ ಜಮೀನು ಬೇಕು ಎಂಬ ಕಾನೂನು ಇದೆ. ಇದು ಕೈಗಾರಿಗೆ ಬೆಳವಣಿಗೆಗೆ  ತೊಡಕಾಗಿದೆ. ಇಲ್ಲಿ ಒಟ್ಟಿಗೆ ಅಷ್ಟು ಜಾಗ ಸಿಗುವುದು ಕಷ್ಟ. ಈ ನಿಯಮ ಬದಲಾವಣೆ ಮಾಡಿದರೆ ಶಿವಮೊಗ್ಗದಲ್ಲಿ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಯಾಗಲಿದೆ. ಅನೇಕ ಸಮಸ್ಯೆ ಪರಿಹಾರ ಆಗಲಿದೆ.ರಮೇಶ್, ಕೈಗಾರಿಕೋದ್ಯಮಿ
ಶಿವಮೊಗ್ಗದಲ್ಲಿ ಟ್ರಕ್ ಟರ್ಮಿನಲ್ ಇಲ್ಲದ ಕಾರಣ ತೊಂದರೆ ಆಗುತ್ತಿದೆ. ಟ್ರಕ್‍ಗಳನ್ನು ನಿಲ್ಲಿಸಲು ಜಾಗ ಇಲ್ಲದ ಕಾರಣ ಹೆಚ್ಚು ಬಾಡಿಗೆ ಕೇಳುತ್ತಾರೆ. ಇದು ಕೈಗಾರಿಕೋದ್ಯಮಿಗಳಿಗೆ ಹೊರೆಯಾಗಿದೆ. ಪ್ರದೀಪ್, ಕೈಗಾರಿಕೋದ್ಯಮಿ
ಕೋಟೆಗಂಗೂರು ರೈಲ್ವೆ ಕೋಚಿಂಗ್‌ ಫ್ಯಾಕ್ಟರಿ ಕಾಮಗಾರಿ ವೇಗ ಹೆಚ್ಚಿಸಬೇಕು. ಟ್ರೇಡ್ ಲೈಸೆನ್ಸ್ ಪ್ರಕ್ರಿಯೆ ತುಂಬಾ ವಿಳಂಬವಾಗುತ್ತಿದೆ. ಇದರಿಂದ ಹಲವರು ಲೈಸೆನ್ಸ್ ಪಡೆಯಲು ಕಷ್ಟವಾಗುತ್ತಿದೆ. ಸ್ಮಾರ್ಟ್‍ಸಿಟಿ ಕಾಮಗಾರಿ, ಫುಟ್‍ಪಾತ್‌ನಲ್ಲಿ ಸಾಕಷ್ಟು ಅಂಗಡಿಗಳಿಂದ ತೊಂದರೆಯಾಗುತ್ತಿದೆ.ಉದಯ ಕುಮಾರ್, ಉದ್ಯಮಿ

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪಾಲಿಕೆ ಆಯುಕ್ತ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣಗೌಡ, ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷ ವಾಸುದೇವ, ಕಾರ್ಯದರ್ಶಿ ವಸಂತ ಹೋಬಳಿದಾರ್, ಜಂಟಿ ಕಾರ್ಯದರ್ಶಿ ವಿಜಯಕುಮಾರ್, ಅಶ್ವಥನಾರಾಯಣ, ಸಂಯೋಜಕ ಸಂಘದ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಹಾಜರಿದ್ದರು.

ಇದನ್ನೂ ಓದಿ – ಸೊರಬದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನಕ್ಕೆ ದಿನಾಂಕ ಫಿಕ್ಸ್‌, ಎಲ್ಲಿ ನಡೆಯುತ್ತೆ ಜನತಾ ದರ್ಶನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment