ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 NOVEMBER 2023
SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು.
ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ ನೀಡಲಾಯಿತು. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉದ್ಘಾಟಿಸಿದರು.
80ಕ್ಕೂ ಹೆಚ್ಚು ಮನೆಗಳಗೆ ತಂಡ
ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಿಂದ ಎರಡು ತಂಡಗಳು ಭಾನುವಾರ ಸಂಜೆಯಿಂದ ಅಂಟಿಕೆ ಪಂಟಿಗೆಯ ಜ್ಯೋತಿ ಹೊತ್ತು ಸಾಗಿದವು. ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಜ್ಯೋತಿಯನ್ನು ಬರಮಾಡಿಕೊಂಡರು. 80ಕ್ಕು ಹೆಚ್ಚು ಮೆನೆಗಳಿಗೆ ಅಂಟಿಕೆ ಪಂಟಿಗೆ ತಂಡ ಬೆಳಗಿನ ಜಾವದವರೆಗೂ ತೆರಳಿತು.
ಇದನ್ನೂ ಓದಿ- ಶಿವಮೊಗ್ಗದ ವಾಹನ ಸವಾರರೆ ಹುಷಾರ್, ಸರ್ಕಲ್ನಲ್ಲಿ ಬೃಹತ್ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?
ಗಮನ ಸೆಳೆದ ಅಂಟಿಗೆ ಪಂಟಿಗೆ ಪದ
ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಗೆ ಪಂಟಿಗೆ ಪದಗಳ ಗಮನ ಸೆಳೆಯಿತು. ‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಗೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸಿದರು. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.
ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ತಂಡದೊಂದಿಗೆ ಹೆಜ್ಜೆ ಹಾಕಿದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ, ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಭೈರಾಪುರ ಶಿವಪ್ಪಮೇಷ್ಟು, ದೇವರಾಜ್, ಬಿ.ಟಿ.ಅಂಬಿಕಾ, ಮಹಾದೇವಿ, ಪಿ.ಕೆ.ಸತೀಶ್, ಶ್ರೀನಿವಾಸ ನಗಲಾಪುರ, ಸುಶೀಲ ಷಣ್ಮುಗಂ, ಸಿ.ಎಂ.ನೃಪತುಂಗ, ಲಲಿತಮ್ಮ, ಲೀಲಾವತಿ, ವಾಸಪ್ಪಗೌಡ, ಯೋಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















