ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 NOVEMBER 2023
ಸಾಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, 3 ಅರೆಸ್ಟ್
SAGARA : ನಗರದ ಅಣಲೆಕೊಪ್ಪ, ಎಸ್.ಎನ್.ನಗರ, ವರದಹಳ್ಳಿ ರಸ್ತೆಯಲ್ಲಿ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಅಣಲೆಕೊಪ್ಪದ ರಾಘವೇಂದ್ರ, ಸೈಯದ್ ಇರ್ಫಾನ್, ಸೈಯದ್ ಅಸ್ಲಂ ಬಂಧಿತರು. ಮತ್ತೊಬ್ಬ ಆರೋಪಿ ಆರೀಫ್ ಪರಾರಿಯಾಗಿದ್ದಾನೆ. ಅಬಕಾರಿ ಇನ್ಸ್ಪೆಕ್ಟರ್ ಸಂದೀಪ್ ಎಲ್.ಸಿ, ಸಂತೋಷ್ ರಡ್ಡೇರ್, ಶಿವಪ್ರಸಾದ್, ವಾಸವಿ, ಸಿಬ್ಬಂದಿ ದೀಪಕ್, ಕನ್ನಯ್ಯ, ಮಹಬಲೇಶ್, ಅರುಣ, ಗಣಪತಿ, ಮುದಾಸಿರ್, ಪುಟ್ಟಪ್ಪ, ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸಂದರ್ಶನ
SHIMOGA : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ನ.15 ರಂದು ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ: 08182-200872 ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯೇಂದ್ರ ಭೇಟಿಯಾದ ಹಾಲಪ್ಪ
SAGARA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ.ವಿಜಯೇಂದ್ರ ಅವರನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಅಭಿನಂದಿಸಿದರು.
ಇದೇ ವೇಳೆ ಮಾತನಾಢಿದ ಹಾಲಪ್ಪ, ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ವಿಜಯೇಂದ್ರ ಪಾತ್ರ ದೊಡ್ಡದಿದೆ. ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಲಿದೆ ಎಂದರು.
ಇದನ್ನೂ ಓದಿ- ಫೇಸ್ಬುಕ್ ಕಾಮೆಂಟ್ ವಿರುದ್ಧ ದೂರು ನೀಡಿದ ಸಿಎಂ ಖಾದರ್, ಏನಿದು ಪ್ರಕರಣ?
ದೆಹಲಿಗೆ ಗೌತಮಪುರ ಶಾಲೆಯ ಡೊಳ್ಳು ತಂಡ
SAGARA : ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಶಿವಮೊಗ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕದಿಂದ ಸಾಗರ ತಾಲೂಕಿನ ಮಕ್ಕಳು, ಡೊಳ್ಳು ಕುಣಿತ, ವಿಚಾರಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಗೌತಮಪುರದ ಮಲೆನಾಡು ಪ್ರೌಢಶಾಲೆಯ ಮಕ್ಕಳು ಡೊಳ್ಳು ಕುಣಿತ ಪ್ರದರ್ಶನ ನೀಡಲಿದ್ದಾರೆ. ಸಾಗರದ ಬಿಇಓ ಪರಶುರಾಮ, ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಸಾಗರ್ ಮಂಡಗಳಲೆ, ಸಾಗರ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್ ಬೈರಾಪುರ, ಗೌತಮ ಪುರದ ಗ್ರಾಮಸ್ಥರು, ಪೋಷಕರು, ಮಲೆನಾಡು ಪ್ರೌಢಶಾಲೆಯ ಅಧ್ಯಕ್ಷರು ಮತ್ತು ಶಿಕ್ಷಕರ ಬಳಗ ,ಗೌತಮ ಪುರದ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳಿಗೆ ಶುಭ ಹಾರೈಸಿದ್ದಾರೆ.
ಈಡಿಗರ ವಧುವರರ ಅನ್ವೇಷಣೆ ಕೇಂದ್ರ
SHIMOGA : ದೀವರ ಕ್ಷೇಮಾಭಿವೃದ್ಧಿ ಸಂಘದಿಂದ ದೀವರ, ಈಡಿಗ, ಪೂಜಾರಿ ನಾಮಧಾರಿ ನಾಯ್ಕ ಸೇರಿದಂತೆ ಸಮುದಾಯದ ಇತರೆ ಉಪಪಂಗಡಗಳು ವಧು ವರ ಅನ್ವೇಷಣಾ ಕೇಂದ್ರ ಆರಂಭಿಸಲಾಗಿದೆ. ಸಮಾಜದ ವಧುವರರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಂಘದಲ್ಲಿ ನೋಂದಣಿ ಮಾಡಬಹುದಾಗಿದೆ. ವಧು-ವರರ ಪೋಷಕರ ಸಮಾಲೋಚನಾ ಸಭೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಘದ ಅಧ್ಯಕ್ಷ ಹೆಚ್.ನಾಗರಾಜ್ 94484 38257, ಉಪಾಧ್ಯಕ್ಷ 9449921957 ಈ ನಂಬರುಗಳಿಗೆ ಸಂಪರ್ಕಿಸಬಹುದಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















