SHIVAMOGGA LIVE NEWS | 14 NOVEMBER 2023
SAGARA : ಮುಳ್ಳು ಹಂದಿ ಬೇಟೆಯಾಡಿ ಅದರ ಚರ್ಮ, ಮಾಂಸವನ್ನು ಬಳಕೆ ಮಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ವರನ್ನು ಬಂಧಿಸಿದೆ. ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಈಶ್ವರ, ರಾಘವೇಂದ್ರ, ಪ್ರಭಾಕರ್, ಶ್ರೀಧರ್ ಬಂಧಿತರು. ಆರೋಪಿಗಳ ಬಳಿ ಇದ್ದ ಮುಳ್ಳು ಹಂದಿ ಮಾಂಸ, ಚರ್ಮ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಲಯ ಅರಣ್ಯಾಧಿಕಾರಿ ಪಿ. ಅರವಿಂದ್, ಅಶೋಕ್, ನಮಿತಾ, ಸತೀಶ್ ಕತ್ತಿಕೈ, ಲೋಕೇಶ್ ದಾಳಿ ನಡೆಸಿದ್ದರು.
ಇದನ್ನೂ ಓದಿ- ಕಾರು, ಬೈಕ್ ಡಿಕ್ಕಿ, ಆಗುಂಬೆ ಗೇಟ್ ವಾಚರ್ ನಿಧನ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200