SHIVAMOGGA LIVE NEWS | 18 NOVEMBER 2023
SHIMOGA : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ (Central jail) ಕೈದಿಯೊಬ್ಬ ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ.
ಮೆಗ್ಗಾನ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು
ಉಡುಪಿಯ ರಾಜೇಂದ್ರ ನಾಯಕ್ (52) ಮೃತ ಕೈದಿ. ಅನಾರೋಗ್ಯದ ಕಾರಣ ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ರಾಜೇಂದ್ರನನ್ನು ಕರೆತಂದಿದ್ದ ಪೊಲೀಸರು ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ ಕರೆತಂದು ಒಳರೋಗಿಯಾಗಿ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಇದನ್ನೂ ಓದಿ- ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್ ಡಿಕ್ಕಿ, ತಲೆಗೆ ತೀವ್ರ ಗಾಯ
ಉಡುಪಿಯ ಕೊಲೆ ಪ್ರಕರಣದಲ್ಲಿ ಶಿಕ್ಷೆ
ಉಡುಪಿ ಜಿಲ್ಲೆಯ ಹಂಗಾರಕಟ್ಟೆಯಲ್ಲಿ ಮೂರು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ರಾಜೇಂದ್ರ ನಾಯಕ್ಗೆ ಶಿಕ್ಷೆಯಾಗಿತ್ತು. ಹಾಗಾಗಿ ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central jail) ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಸಜಾಬಂಧಿಯಾಗಿದ್ದ ರಾಜೇಂದ್ರ ನಾಯಕ್ ಕಳೆದ ಕೆಲ ವರ್ಷದಿಂದ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200