ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 NOVEMBER 2023
SHIMOGA : ವಿಮಾನ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಸ್ಥಳೀಯರು ಅಡ್ಡಿಪಡಿಸಿ, ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರ ಜೊತೆಗೆ ಮಾತಿನ ಚಕಮಕಿಯು ನಡೆಯಿತು.
ಏನಿದು ಮುಂದುವರೆದ ಕಾಮಗಾರಿ?
ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ ವ್ಯವಸ್ಥೆಗಾಗಿ ಮುಂದುವರೆದ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿದೆ. ಅಂದಾಜು 500 ಮೀಟರ್ನಷ್ಟು ಜಾಗವನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಬಳಕೆ ಮಾಡಿಕೊಂಡಿದೆ. ಈ ಜಾಗದಲ್ಲಿ ನೈಟ್ ಲ್ಯಾಂಡಿಂಗ್ಗೆ ಅಗತ್ಯವಿರುವ ಬೀಕಾನ್ಗಳ ಅಳವಡಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇವತ್ತು ಕಾಮಗಾರಿ ಆರಂಭವಾಗುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳೀಯರ ಆಕ್ರೋಶಕ್ಕೆ ಕಾರಣವೇನು?
ಮುಂದುವರೆದ ಕಾಮಗಾರಿ ಹಿನ್ನೆಲೆ ವಿಮಾನ ನಿಲ್ದಾಣ ಕಾಂಪೌಂಡ್ ಪಕ್ಕದ ರಸ್ತೆ ಬಂದ್ ಮಾಡಲಾಗುತ್ತಿದೆ. ರಸ್ತೆಯ ಸುತ್ತಲು ಕಾಂಪೌಂಡ್ ಹಾಕಲಾಗುತ್ತಿದೆ. ಆದರೆ ಇದೇ ಮಾರ್ಗವಾಗಿ ಹೊಸ ಜೈಲು, ಸಿದ್ಧರಹಟ್ಟಿಗೆ ತೆರಳಬೇಕು. ರಸ್ತೆ ಬಂದ್ ಮಾಡಿದರೆ ಒಂದು ಕಿ.ಮೀ ಸುತ್ತಿ ಬಳಸಿ ಬರಬೇಕಿದೆ. ಆ ಮಾರ್ಗದಲ್ಲಿ ಜನ ಸಂಚಾರ ಕಡಿಮೆ. ಪುಂಡರ ಕಾಟ ಹೆಚ್ಚು. ಇದರಿಂದ ಮಹಿಳೆಯರು, ಮಕ್ಕಳು ಓಡಾಡುವುದು ಕಷ್ಟ ಮತ್ತು ಅಸುರಕ್ಷಿತ. ಹಾಗಾಗಿ ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸಬೇಕು, ಪೊಲೀಸ್ ಬೀಟ್ ಹೆಚ್ಚಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.
ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ
ಪೊಲೀಸರ ಜೊತೆಗೆ ಮಾತಿನ ಚಕಮಕಿ
ಇನ್ನು, ಪ್ರತಿಭಟನಾನಿರತನ್ನು ಪೊಲೀಸರು ಸಮಾಧಾನಪಡಿಸಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಸ್ಥಳೀಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತಹಶೀಲ್ದಾರ್ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಪರ್ಯಾಯ ಮಾರ್ಗದಲ್ಲಿ ಬೀದಿ ದೀಪ ಅಳವಡಿಸುವುದು ಸೇರಿದಂತೆ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಂದೇ ದಿನ 400 ಮಂದಿ ಪ್ರಯಾಣ, ಎಲ್ಲೆಲ್ಲಿಗೆ ಎಷ್ಟು ಜನ ತೆರಳಿದರು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















