ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2023
SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸಚಿವರು ಹೇಳಿದ್ದೇನು?
ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ ಆಗಿಲ್ಲ ಎಂದು ಸಾರ್ವನಿಕರಿಂದ ದೂರುಗಳು ಬಂದಿವೆ. ಅಧಿಕಾರಿಗಳು ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರಿಗೆ ಕೊರತೆ ಆಗಬಾರದು ಎಂದು ಅವರು ತಿಳಿಸಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
ಅರಣ್ಯ ಇಲಾಖೆ ಅಧಿಕಾರಿಗಳು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಹೊಸದಾಗಿ ಭೂಮಿ ಸಾಗುವಳಿ ಮಾಡಲು ಬಿಡಬೇಡಿ. ಸರ್ಕಾರದ ಯೋಜನೆ ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಅವರು ಸೂಚಿಸಿದರು.
ತಾಲೂಕಿನಲ್ಲಿ ಜನವರಿ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೆ ಸಮಸ್ಯೆ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ವಿಶ್ವನಾಥ್, ಇ.ಒ ಪರಮೇಶ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
LATEST NEWS
- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

About The Editor
ನಿತಿನ್ ಆರ್.ಕೈದೊಟ್ಲು















