ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 DECEMBER 2023
SHIMOGA : ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ವಕೀಲರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ವಕೀಲರ ರಕ್ಷಣೆಗೆ ಪ್ರತ್ಯೇಕ ಕಾಯ್ದೆ ರಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಒಂದೂವರೆ ಗಂಟೆ ರಸ್ತೆ ತಡೆ
ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರು ಇವತ್ತು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಆವರಣದಿಂದ ಗೋಪಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಗೋಪಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ವಕೀಲರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ
ಪೊಲೀಸರ ಜೊತೆ ಮಾತಿಗೆ ಮಾತು
ಇನ್ನು, ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ವಕೀಲರ ಮನವಿ ಆಲಿಸಿದರು. ಆದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ಸ್ಥಳಕ್ಕೆ ಆಗಮಿಸಬೇಕು ಎಂದು ವಕೀಲರು ಪಟ್ಟು ಹಿಡಿದರು. ಈ ವೇಳೆ ವಕೀಲರು ಮತ್ತು ಪೊಲೀಸರ ಜೊತೆ ಮಾತಿಗೆ ಮಾತಾಯಿತು.

ಗೂಂಡಾಗಳಂತೆ ವರ್ತನೆ, ಅಮಾನುಷ ಹಲ್ಲೆ
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿರಿಯ ವಕೀಲ ಕೆ.ಪಿ.ಶ್ರೀಪಾಲ್, ಇದು ಇಡೀ ಪೊಲೀಸ್ ಇಲಾಖೆ ವಿರುದ್ಧದ ಹೋರಾಟವಲ್ಲ. ಪೊಲೀಸ್ ಇಲಾಖೆಯಲ್ಲಿ ಗೂಂಡಾ ವರ್ತನೆ ಮಾಡುವವರು ಮತ್ತು ಭ್ರಷ್ಟರ ವಿರುದ್ಧದ ಹೋರಾಟ. ಯುವ ವಕೀಲನ ಮೇಲೆ ಗೂಂಡಾಗಳಂತೆ ಹಲ್ಲೆ ನಡೆಸಲಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಜಾಮ್
ಗೋಪಿ ಸರ್ಕಲ್ನಲ್ಲಿ ವಕೀಲರು ಬಹು ಹೊತ್ತು ಪ್ರತಿಭಟನೆ ನಡೆಸಿದ್ದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಆದರೆ ಕಿರಿದಾದ ರಸ್ತೆಗಳಿಂದಾಗಿ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.


LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















