ಗೋವಿಂದಾಪುರದಲ್ಲಿ ಮನೆ ಬಾಗಲಿನ ಬೀಗ ಮುರಿದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 DECEMBER 2023

SHIMOGA : ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಲಾಗಿದೆ. ಶಿವಮೊಗ್ಗ ತಾಲೂಕು ಗೋವಿಂದಾಪುರದ ವಿಜಯಲಕ್ಷ್ಮಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಹಾಯ್‌ಹೊಳೆಯಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ವೀಕ್ಷಿಸಲು ವಿಜಯಲಕ್ಷ್ಮಿ ಅವರು ಪತಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಗೋವಿಂದಾಪುರದ ವಾಸದ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮನೆಯ ಸ್ಟೀಲ್‌ ಹುಂಡಿಯಲ್ಲಿಟ್ಟದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಒಂದು ಲಕ್ಷ ರೂ. ನಗದು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಕಳ್ಳತನವಾಗಿರುವ ಚಿನ್ನಾಭರಣ ಮತ್ತು ನಗದು ಮೊತ್ತ 2.95 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಜನ ಶತಾಬ್ದಿ, ಇಂಟರ್‌ಸಿಟಿ ವಿರುದ್ಧ ದೂರು, ಬಳಕೆದಾರರ ಸಭೆಯಲ್ಲಿ ಏನೇನೆಲ್ಲ ಚರ್ಚೆಯಾಯ್ತು? ಇಲ್ಲಿದೆ 7 ಪಾಯಿಂಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment