ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 DECEMBER 2023
EDUCATION NEWS : ಅಲ್ಲಿ ವಿದ್ಯಾರ್ಥಿಗಳೇ ನಿರ್ಮಿಸಿದ್ದ ರೋಬೊಗಳು ರಸ್ತೆಯ ಉಬ್ಬು ತಗ್ಗುಗಳ ಲೆಕ್ಕಿಸದೇ ಮುನ್ನುಗುತ್ತಿತ್ತು. ವಿವಿಧ ಸರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ತಂಡದ ರೋಬೊಗಳ ಪ್ರದರ್ಶನ ನೋಡುಗರನ್ನು ರೋಮಾಂಚನಗೊಳಿಸಿತ್ತು.
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ, ಐಇಟಿಇ ವಿದ್ಯಾರ್ಥಿಗಳ ವೇದಿಕೆ ಹಾಗೂ ಐಇಇಇ ವಿದ್ಯಾರ್ಥಿ ಘಟಕದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ‘ಪ್ಲಾಸ್ಮಾ – 2023’ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ರೋಬೋಗಳು ತಮ್ಮ ಕಾರ್ಯಕ್ಷಮತೆ ಪ್ರದರ್ಶಿಸಿದವು.
ರೋಬೊ ಲೈನ್ ಫಾಲೊವರ್, ರೋಬೊ ಸಾಸರ್, ರೋಬೊ ರೇಸ್, ಹ್ಯಾಕಥಾನ್, ಸುಮೊ ವಾರ್ ಸ್ಪರ್ಧೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 150 ಕ್ಕು ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ತಾವೇ ನಿರ್ಮಿಸಿದ ರೋಬೊಗಳೊಂದಿಗೆ ಭಾಗವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರಿನ ಎವನ್ ಲಾಜಿಕ್ಸ್ ಕಂಪನಿ ಸ್ಥಾಪಕರಾದ ಪ್ರವೀಣ್ ಉಡುಪ ಮಾತನಾಡಿ, ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನವಾಗಲಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಪಕ್ಕದವರೇ ನಮಗೆ ಸ್ಪರ್ಧಿಗಳಾಗಿರುತ್ತಾರೆ ಎಂಬ ಅರಿವು ಬೇಕಿದೆ ಎಂದು ಹೇಳಿದರು.
ಶಿಕ್ಷಣದ ಜೊತೆಗೆ ವಿಶ್ಲೇಷಣಾತ್ಮಕ ಚಿಂತನೆಗಳು ಹಾಗೂ ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಬಗೆಹರಿಸುವ ಕೌಶಲ್ಯತೆಗಳ ಅವಶ್ಯಕತೆಯಿದೆ. ಉದ್ಯೋಗ ನೀಡುವ ಸಂಸ್ಥೆಗಳು ನಮ್ಮಿಂದ ಬಯಸುವುದೇ ಇಂತಹ ಪ್ರಯೋಗಾತ್ಮಕ ಕೌಶಲ್ಯಗಳನ್ನು. ನಾವು ತಲುಪಬೇಕಿರುವ ಗುರಿ ಮತ್ತು ಎದುರಿಸುವ ಸ್ಪರ್ಧಾತ್ಮಕ ವಾತಾವರಣಕ್ಕೆ ವಿದ್ಯಾರ್ಥಿ ದೆಸೆಯಿಂದಲೇ ಸಿದ್ದರಾಗಿ. ಕೃತಕ ಬುದ್ಧಿಮತ್ತೆ ಮತ್ತು ರೋಬೊಟಿಕ್ಸ್ ಕ್ಷೇತ್ರ ಅನೇಕ ಉದ್ಯೋಗವಕಾಶಗಳನ್ನು ಹೊಂದಿದೆ. ನಿಮ್ಮ ನಾವೀನ್ಯ ಯೋಜನೆಗಳಿಗೆ ಹೊಸ ತಂತ್ರಜ್ಞಾನಗಳ ಸ್ಪರ್ಶ ನೀಡಿ. ಸಾಧ್ಯವಾದಷ್ಟು ಆರಾಮದಾಯಕ ಮನಸ್ಥಿತಿಗಳಿಂದ ಹೊರಬಂದು ನಿರಂತರ ಕಲಿಕೆಯಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

[su_quote cite=”ಡಾ.ಪಿ.ನಾರಾಯಣ್, ಸಹ ಕಾರ್ಯದರ್ಶಿ, ರಾಷ್ಟ್ರೀಯ ಶಿಕ್ಷಣ ಸಮಿತಿ“]ವಿದ್ಯಾರ್ಥಿಗಳು ಕಲಿಯುತ್ತಿರುವ ಶಿಕ್ಷಣಕ್ಕೂ ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆಗೊಳಿಸಲು ಇಂತಹ ಕಾರ್ಯಕ್ರಮಗಳು ಬೇಕಿದೆ. ಹೇಗೆ ಪ್ಲಾಸ್ಮಾ ಮಾನವನಲ್ಲಿ ಹೊಸ ರಕ್ತ ಉತ್ಪಾದನೆಗೆ ಅವಶ್ಯಕವೊ ಹಾಗೆಯೇ ಹೊಸ ಆಲೋಚನೆಗಳಿಗೆ ಇಂತಹ ಪ್ಲಾಸ್ಮಾ ಕಾರ್ಯಕ್ರಮ ಪೂರಕವಾಗಲಿ[/su_quote]
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಎಸ್.ಸುರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕರಾದ ಅನಿಲ್ ಕುಮಾರ್.ಜೆ, ಪ್ರದೀಪ್. ಎಸ್.ಸಿ, ಪ್ರಶಾಂತ.ಜಿ.ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ – ಬಂಗಾರಧಾಮದಲ್ಲಿ ಸ್ಮಾರಕ ರೆಡಿ, ಲೋಕಾರ್ಪಣೆಗೆ ದಿನಾಂಕ ನಿಗದಿ, ಯಾರೆಲ್ಲ ಭಾಗವಹಿಸ್ತಿದ್ದಾರೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















